ಇಬ್ಬರು ಕನ್ನಡತಿಯರಿಗೆ ರಾಜ್ಯ ಸರ್ಕಾರದಿದ ಬಂಪರ್ ಬಹುಮಾನ

Published : Jul 29, 2017, 06:18 PM ISTUpdated : Apr 11, 2018, 12:55 PM IST
ಇಬ್ಬರು ಕನ್ನಡತಿಯರಿಗೆ ರಾಜ್ಯ ಸರ್ಕಾರದಿದ  ಬಂಪರ್ ಬಹುಮಾನ

ಸಾರಾಂಶ

ವಿಶ್ವಕಪ್ ಫೈನಲ್'ನಲ್ಲಿ  ಇಂಗ್ಲೆಂಡ್ ವಿರುದ್ಧ ಭಾರತ ತಂಡ 9 ರನ್'ಗಳಿಂದ ಪರಾಭವಗೊಂಡಿತ್ತು. ಅಲ್ಲದೆ ಈ ಪಂದ್ಯದಲ್ಲಿ ಅಂತಿಮ ಕ್ಷಣದವರೆಗೂ ವೇದಾ ಹೋರಾಟ ನಡೆಸಿದ್ದರು. ಅವರು ಔಟಾದ ನಂತರವೇ ಪಂದ್ಯ ತಿರುವು ಪಡೆದುಕೊಂಡಿತು.

ಉಡುಪಿ(ಜು.29): ಭಾರತ ಮಹಿಳಾ ಕ್ರಿಕೆಟ್ ತಂಡದ ಇಬ್ಬರು ಕನ್ನಡತಿಯರಿಗೆ ಕರ್ನಾಟಕ ರಾಜ್ಯ ಸರ್ಕಾರ ತಲಾ 25 ಲಕ್ಷ ಬಹುಮಾನ ಘೋಷಿಸಿದೆ.

ಮಧ್ಯಮ ಕ್ರಮಾಂಕದ ಆಟಗಾರ್ತಿ ಚಿಕ್ಕಮಗಳೂರಿನ ವೇದಾ ಕೃಷ್ಣಮೂರ್ತಿ ಹಾಗೂ ವಿಜಯಪುರದ ರಾಜೇಶ್ವರಿ ಗಾಯಕ್ವಾಡ್ ಅವರಿಗೆ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಬಹುಮಾನ ಘೋಷಿಸಿದ್ದಾರೆ. ಇಂಗ್ಲೆಂಡ್'ನಲ್ಲಿ ನಡೆದ ಮಹಿಳಾ ವಿಶ್ವಕಪ್'ನಲ್ಲಿ ಟೀಂ ಇಂಡಿಯಾ ರನ್ನರ್'ಅಪ್ ಸ್ಥಾನ ಗಳಿಸಲು ಪ್ರಮುಖ ಕಾರಣರಾದ ಈ ಇಬ್ಬರು ಆಟಗಾರ್ತಿಯರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ವಿಶ್ವಕಪ್ ಫೈನಲ್'ನಲ್ಲಿ  ಇಂಗ್ಲೆಂಡ್ ವಿರುದ್ಧ ಭಾರತ ತಂಡ 9 ರನ್'ಗಳಿಂದ ಪರಾಭವಗೊಂಡಿತ್ತು. ಅಲ್ಲದೆ ಈ ಪಂದ್ಯದಲ್ಲಿ ಅಂತಿಮ ಕ್ಷಣದವರೆಗೂ ವೇದಾ ಹೋರಾಟ ನಡೆಸಿದ್ದರು. ಅವರು ಔಟಾದ ನಂತರವೇ ಪಂದ್ಯ ತಿರುವು ಪಡೆದುಕೊಂಡಿತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?