
ಬೆಂಗಳೂರು(ಜುಲೈ 26): ಏಕದಿನ ವಿಶ್ವಕಪ್ ಫೈನಲ್ ಸಾಧನೆ ಮಾಡಿ ಇತಿಹಾಸ ನಿರ್ಮಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿಯರಿಗೆ ಬಿಸಿಸಿಐ ತಲಾ 50 ಲಕ್ಷ ರೂಪಾಯಿ ಬಹುಮಾನ ಮೊತ್ತ ಘೋಷಿಸಿತ್ತು. ಹಾಗೆ ಆಟಗಾರ್ತಿಯರನ್ನು ಪ್ರತನಿಧಿಸುವ ಕೆಲ ರಾಜ್ಯ ಸರ್ಕಾರಗಳೂ ಸಹ ಆಟಗಾರ್ತಿಯರಿಗೆ ಬಹುಮಾನ ಮೊತ್ತ ಮತ್ತು ಸರ್ಕಾರಿ ಹುದ್ದೆ ನೀಡುವುದಾಗಿ ಭರವಸೆ ನೀಡಿದ್ದವು. ಹರ್ಮನ್'ಪ್ರೀತ್ ಕೌರ್ಗೆ ಪಂಜಾಬ್ ಸರ್ಕಾರ ಮತ್ತು ಸುಷ್ಮಾ ವರ್ಮಾ ಹಿಮಾಚಲ ಪ್ರದೇಶ ಸರ್ಕಾರ ಸರ್ಕಾರಿ ಉದ್ಯೋಗದ ಭರವಸೆ ನೀಡಿದೆ. ಆದ್ರೆ ವರ್ಲ್ಡ್'ಕಪ್ನಲ್ಲಿ ಆಡಿ ಮಿಂಚಿದ ಕರ್ನಾಟಕ ವೇದಾ ಕೃಷ್ಣಮೂರ್ತಿ ಮತ್ತು ರಾಜೇಶ್ವರಿ ಗಾಯಕ್ವಾಡ್ ಅವರಿಗೆ ಕರ್ನಾಟಕ ಸರ್ಕಾರ ಯಾವುದೇ ಬಹುಮಾನ ಮೊತ್ತವಾಗಲಿ, ಉದ್ಯೋಗದ ಭರವಸೆಯಾಗಲಿ ನೀಡಿಲ್ಲ. ವಿಶ್ವ ಮಟ್ಟದಲ್ಲಿ ಭಾರತದ ಮತ್ತು ಕರ್ನಾಟಕದ ಕೀರ್ತಿ ಹೆಚ್ಚಿಸಿ ಮಹಿಳೆಯರನ್ನ ಕರ್ನಾಟಕ ಸರ್ಕಾರ ಕಡೆಗಣಿಸಿದೆ. ಈ ಬಗ್ಗೆ ಟೀಕೆಗಳು ಕೇಳಿ ಬರ್ತಿವೆ. ರಾಜ್ಯ ಸರ್ಕಾರ ಮುಂದಿನ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳುವುದರಲ್ಲಿ ನಿರತವಾಗಿದೆಯೇ ಹೊರತು ಸಾಧಕರನ್ನ ಗುರುತಿಸುವಲ್ಲಿ ವಿಫಲವಾಗಿದೆ ಎಂದು ಕ್ರೀಡಾ ವಲಯದಲ್ಲಿ ಭಾರೀ ಟೀಕೆಗಳು ಕೇಳಿ ಬರ್ತಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.