
ಮುಂಬೈನಲ್ಲಿ ನಡೆಯುತ್ತಿರುವ ಅಸ್ಸಾಂ ವಿರುದ್ಧದ ಪಂದ್ಯದಲ್ಲಿ ಕರ್ನಾಟಕ ತಂಡ ಇನ್ನಿಂಗ್ಸ್ ಮುನ್ನಡೆ ಸಾಧಿಸಿದೆ. ಅಸ್ಸಾಂ ತಂಡವನ್ನ 325 ರನ್ಗೆ ಆಲೌಟ್ ಮಾಡಿದ್ದ ಕರ್ನಾಟಕ ತಂಡ 570 ರನ್ಗೆ ಆಲೌಟ್ ಆಯ್ತು.ಈ ಮೂಲಕ 245 ರನ್ ಇನ್ನಿಂಗ್ಸ್ ಮುನ್ನಡೆ ಸಾಧಿಸ್ತು. ಆಲ್ರೌಂಡರ್ ಸ್ಟುವರ್ಟ್ ಬಿನ್ನಿ ಭರ್ಜರಿ ಶತಕ ಸಿಡಿಸಿದ್ರು. ಬಿನ್ನಿ 158 ಬಾಲ್ನಲ್ಲಿ 17 ಬೌಂಡ್ರಿ, 3 ಸಿಕ್ಸ್ ಸಹಿತ 156 ರನ್ ಬಾರಿಸಿದರು. ಸಿಎಂ ಗೌತಮ್ 73 ಹಾಗೂ ಶ್ರೇಯಸ್ ಗೋಪಾಲ್ 35 ರನ್ ಹೊಡೆದ್ರು. ಅಸ್ಸಾಂ ಸೆಕೆಂಡ್ ಇನ್ನಿಂಗ್ಸ್ನಲ್ಲಿ 3ನೇ ದಿನದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 48 ರನ್ ಗಳಿಸಿದೆ. ಇನ್ನೂ 197 ರನ್ ಹಿನ್ನಡೆಯಲ್ಲಿರುವ ಅಸ್ಸಾಂ, ಕೊನೆಯ ದಿನ ಡ್ರಾಗಾಗಿ ಹೋರಾಟ ನಡೆಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.