
ಮೈಸೂರು(ಅ.15): ಆಲ್ರೌಂಡರ್ ಕೆ. ಗೌತಮ್ ಮತ್ತು ಆರಂಭಿಕ ಆಟಗಾರ ರವಿಕುಮಾರ್ ಸಮರ್ಥ್ ಅವರ ಶತಕದ ನೆರವಿನಿಂದ ಕರ್ನಾಟಕ ತಂಡ ಅಸ್ಸಾಂ ವಿರುದ್ಧ ರಣಜಿ ಟ್ರೋಫಿಯಲ್ಲಿ ಬೃಹತ್ ಮುನ್ನಡೆಯತ್ತ ಹೆಜ್ಜೆ ಹಾಕಿದೆ.
ಇಲ್ಲಿನ ಗಂಗೋತ್ರಿ ಗ್ಲೈಡ್ಸ್ ಮೈದಾನದಲ್ಲಿ ನಡೆಯುತ್ತಿರುವ ‘ಎ’ ಗುಂಪಿನ ಪಂದ್ಯದಲ್ಲಿ ಆತಿಥೇಯ ತಂಡ ಅಸ್ಸಾಂ ವಿರುದ್ಧ ಸಂಪೂರ್ಣ ಪ್ರಾಬಲ್ಯ ಸಾಧಿಸಿದೆ. ಮೊದಲ ದಿನ ಎದುರಾಳಿಯನ್ನು ಕೇವಲ 145 ರನ್ಗೆ ಆಲೌಟ್ ಮಾಡಿ ಬಳಿಕ ದಿನದಂದತ್ಯಕ್ಕೆ ವಿಕೆಟ್ ನಷ್ಟವಿಲ್ಲದೆ 77 ರನ್ ಗಳಿಸಿದ್ದ ಕರ್ನಾಟಕ 2ನೇ ದಿನದಾಂತ್ಯಕ್ಕೆ 282 ರನ್'ಗಳ ಬೃಹತ್ ಮುನ್ನಡೆ ಸಾಧಿಸಿದೆ.
ಸ್ಕೋರ್
ಕರ್ನಾಟಕ ಮೊದಲ ಇನ್ನಿಂಗ್ಸ್ 427/6 (ಸಮರ್ಥ್ 123, ಗೌತಮ್ 147, ಬಿನ್ನಿ 41, ಅರುಪ್ ದಾಸ್ 3-101, ಸರುಪಂ 3-80), ಅಸ್ಸಾಂ ಮೊದಲ ಇನ್ನಿಂಗ್ಸ್ 145/10
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.