
ಬೆಂಗಳೂರು(ಆ.13): ನಾಯಕ ನಿಕ್ಕಿನ್ ತಿಮ್ಮಯ್ಯ ನೇತೃತ್ವದ ಕರ್ನಾಟಕ ಹಾಕಿ ತಂಡ, ಇಲ್ಲಿ ನಡೆಯುತ್ತಿರುವ ಬೆಂಗಳೂರು ಕಪ್ ಆಲ್ ಇಂಡಿಯಾ ಹಾಕಿ ಟೂರ್ನಿಯಲ್ಲಿ ಮೊದಲ ಗೆಲುವು ಸಾಧಿಸಿದೆ.
ಅಖಿಲ ಭಾರತ ಹಾಕಿ ಟೂರ್ನಿಗೆ ಕರ್ನಾಟಕ ತಂಡ ಪ್ರಕಟ: ನಿಕ್ಕಿನ್ ತಿಮ್ಮಯ್ಯ ನಾಯಕ!
ಸೋಮವಾರ ನಡೆದ ಪಂದ್ಯದಲ್ಲಿ ಕರ್ನಾಟಕ, ದೆಹಲಿಯ ಇಂಡಿಯನ್ ಏರ್ ಫೋರ್ಸ್ ತಂಡದ ವಿರುದ್ಧ 2-1 ಗೋಲುಗಳಿಂದ ಜಯ ಪಡೆಯಿತು. ಕರ್ನಾಟಕ ಪರ ನಿಕ್ಕಿನ್ (8ನೇ ನಿ.), ಸೋಮಯ್ಯ ಕೆ.ಪಿ. (16ನೇ ನಿ.) ಗೋಲು ಗಳಿಸಿದರು.
ಏರ್ ಫೋರ್ಸ್ ಪರ ಆನಂದ್ ಲಾಕ್ರಾ 58ನೇ ನಿಮಿಷದಲ್ಲಿ ಗೋಲು ಬಾರಿಸಿ ಸೋಲಿನ ಅಂತರವನ್ನು ತಗ್ಗಿಸಿದರು. ಮೊದಲ ಪಂದ್ಯದಲ್ಲಿ ಮುಂಬೈನ ಏರ್ ಇಂಡಿಯಾ ಎದುರು ಕರ್ನಾಟಕ 2-2 ರಿಂದ ಡ್ರಾ ಸಾಧಿಸಿತ್ತು.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.