
ಬೆಂಗಳೂರು(ಜು.21): 7ನೇ ಆವೃತ್ತಿ ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿ ಹರಾಜು ಪ್ರಕ್ರಿಯೆ ಹಲವು ಅಚ್ಚರಿಗಳೊಂದಿಗೆ ಮುಕ್ತಾಯವಾಗಿದೆ. ವೇಗಿ ಅಭಿಮನ್ಯು ಮಿಥುನ್ ಗರಿಷ್ಠ ಮೊತ್ತಕ್ಕೆ ಬಿಕರಿಯಾದರೆ, ಹಲವು ಪ್ರಮುಖ ಆಟಗಾರರು ಮೂಲ ಬೆಲೆಗೆ ಹರಾಜಾಗುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.
ಐಪಿಎಲ್ ಟೂರ್ನಿ, ಇಂಡಿಯಾ ಎ ಹಾಗೂ ರಣಜಿ ಟೂರ್ನಿಯಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಅಬ್ಬರಿಸಿದ್ದ ಮಯಾಂಕ್ ಅಗರ್ವಾಲ್, ರಾಜಸ್ಥಾನ ರಾಯಲ್ಸ್ ತಂಡದಲ್ಲಿ ಮಿಂಚಿನ ಪ್ರದರ್ಶನ ನೀಡಿದ ಕೆ ಗೌತಮ್, ಕೆಕೆಆರ್ ತಂಡದಲ್ಲಿ ಮಿಂಚಿದ ಪ್ರಸಿದ್ ಕೃಷ್ಣ ಸೇರಿದಂತೆ ಹಲವು ಆಟಗಾರರನ್ನ ಆರಂಭದಲ್ಲಿ ಯಾವ ಫ್ರಾಂಚೈಸಿ ಕೂಡ ಖರೀದಿಸಲೇ ಇಲ್ಲ.
ಅಂತಿಮ ಹಂತದಲ್ಲಿ ಮಯಾಂಕ್, ಕೆ ಗೌತಮ್ ಸೇರಿದಂತೆ ಕೆಲ ಪ್ರಮುಖ ಆಟಗಾರರು ಮೂಲ ಬೆಲೆಗೆ ಹರಾಜಾಗಿ ಅಚ್ಚರಿ ಮೂಡಿಸಿದರು. ಆದರೆ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಅವರನ್ನ ಯಾವ ಫ್ರಾಂಚೈಸಿ ಕೂಡ ಖರೀದಿಸಲೇ ಇಲ್ಲ. ಹೀಗಾಗಿ ಶ್ರೇಯಸ್ ಗೋಪಾಲ್ ಅನ್ಸೋಲ್ಡ್ ಆಗಿ ಉಳಿದರು.
ನಿರಾಸೆ ಮೂಡಿಸಿದ ಆಟಗಾರರು:
| ಆಟಗಾರು | ತಂಡ | ಮೊತ್ತ |
| ಕೆ ಗೌತಮ್ | ಮೈಸೂರ್ ವಾರಿಯರ್ಸ್ | 25,000 |
| ಮಯಾಂಕ್ ಅಗರ್ವಾಲ್ | ಹುಬ್ಬಳ್ಳಿ ಟೈಗರ್ಸ್ | 25,000 |
| ಪ್ರಸಿದ್ಧ ಕೃಷ್ಣ | ಮೈಸೂರು ವಾರಿಯರ್ಸ್ | 35,000 |
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.