ರಣಜಿ ಟ್ರೋಫಿ: ಶಿವಮೊಗ್ಗದಲ್ಲಿ ಮತ್ತೆ ಜಯಭೇರಿ ಬಾರಿಸಿದ ಕರ್ನಾಟಕ

Published : Oct 27, 2017, 05:45 PM ISTUpdated : Apr 11, 2018, 12:51 PM IST
ರಣಜಿ ಟ್ರೋಫಿ: ಶಿವಮೊಗ್ಗದಲ್ಲಿ ಮತ್ತೆ ಜಯಭೇರಿ ಬಾರಿಸಿದ ಕರ್ನಾಟಕ

ಸಾರಾಂಶ

ಎಚ್ಚರಿಕೆಯಿಂದ ಆಡುತ್ತಿದ್ದ ಸಂದೀಪ್ ವಿಕೆಟ್ ಒಪ್ಪಿಸುತ್ತಿದ್ದಂತೆ ತರಗೆಲೆಗಳಂತೆ ಉದುರಿ ಹೋದ ಹೈದರಾಬಾದ್ 320 ರನ್'ಗಳಿಗೆ ಸರ್ವಪತನ ಕಂಡಿತು.

ಶಿವಮೊಗ್ಗ(ಅ.27): ಯುವ ಸ್ಪಿನ್ನರ್'ಗಳಾದ ಶ್ರೇಯಸ್ ಗೋಪಾಲ್ ಹಾಗೂ ಕೆ. ಗೌತಮ್ ಅವರ ಆಕರ್ಷಕ ಬೌಲಿಂಗ್ ನೆರವಿನಿಂದ ಹೈದರಾಬಾದ್ ವಿರುದ್ಧ ಕರ್ನಾಟಕ ತಂಡ 59 ರನ್'ಗಳ ಭರ್ಜರಿ ಜಯ ದಾಖಲಿಸಿದೆ.

ಇಲ್ಲಿನ ಕೆಎಸ್'ಸಿಎ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್ ತಂಡವನ್ನು 320 ರನ್'ಗಳಿಗೆ ಆಲೌಟ್ ಮಾಡಿದ ಆರ್. ವಿನಯ್ ಕುಮಾರ್ ಪಡೆ ಪ್ರಸಕ್ತ ರಣಜಿ ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿತು.

ಪಂದ್ಯದ ಕೊನೆಯ ದಿನ ಹೈದರಾಬಾದ್ ಗೆಲ್ಲಲು 288 ರನ್'ಗಳನ್ನು ಗಳಿಸಬೇಕಿತ್ತು. ಆದರೆ ಎಸ್. ಗೋಪಾಲ್ ಹಾಗೂ ಕೆ. ಗೌತಮ್ ಇದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಬಾವನಕ ಸಂದೀಪ್(80) ಹಾಗೂ ಆಶೀಶ್ ರೆಡ್ಡಿ(57*) ಜೋಡಿ ಕರ್ನಾಟಕದ ಗೆಲುವಿಗೆ ಕೆಲಕಾಲ ತಡೆಯಾಗಿದ್ದರು. ಆದರೆ ಈ ಜೋಡಿಯನ್ನು ನಾಯಕ ವಿನಯ್ ಕುಮಾರ್ ಬೇರ್ಪಡಿಸಿದರು. ಎಚ್ಚರಿಕೆಯಿಂದ ಆಡುತ್ತಿದ್ದ ಸಂದೀಪ್ ವಿಕೆಟ್ ಒಪ್ಪಿಸುತ್ತಿದ್ದಂತೆ ತರಗೆಲೆಗಳಂತೆ ಉದುರಿ ಹೋದ ಹೈದರಾಬಾದ್ 320 ರನ್'ಗಳಿಗೆ ಸರ್ವಪತನ ಕಂಡಿತು. ಮತ್ತೊಂದೆಡೆ ಸ್ಫೋಟಕ ಬ್ಯಾಟಿಂಗ್ ಆಡಿದ ಆಶೀಸ್ ರೆಡ್ಡಿ 57 ರನ್ ಬಾರಿಸಿ ಅಜೇಯರಾಗುಳಿದರು.

ಸಂಕ್ಷಿಪ್ತ ಸ್ಕೋರ್:

ಕರ್ನಾಟಕ: 183/10&332/10

ಹೈದರಾಬಾದ್: 136/10&320/10

ಪಂದ್ಯ ಪುರುಷೋತ್ತಮ : ಕರುಣ್ ನಾಯರ್

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ ಎದುರು ಅಂಡರ್-19 ಏಷ್ಯಾಕಪ್ ಗೆದ್ದ ಪಾಕ್ ಆಟಗಾರರಿಗೆ ಪ್ರಧಾನಿ ಭಾರೀ ಬಹುಮಾನ ಘೋಷಣೆ!
T20 ವಿಶ್ವಕಪ್‌ನಿಂದ ಹೊರಬಿದ್ದ ಬೆನ್ನಲ್ಲೇ ಈ ಟೂರ್ನಿ ಆಡಲು ರೆಡಿಯಾದ ಶುಭ್‌ಮನ್ ಗಿಲ್! ಹೆಗಲಿಗೆ ಮಹತ್ವದ ಜವಾಬ್ದಾರಿ?