ಶ್ರೇಯಸ್ ದಾಳಿಗೆ ತತ್ತರಿಸಿದ ಹೈದರಾಬಾದ್; ವಿನಯ್ ಪಡೆಗೆ ಇನಿಂಗ್ಸ್ ಮುನ್ನಡೆ

Published : Oct 25, 2017, 03:29 PM ISTUpdated : Apr 11, 2018, 01:11 PM IST
ಶ್ರೇಯಸ್ ದಾಳಿಗೆ ತತ್ತರಿಸಿದ ಹೈದರಾಬಾದ್; ವಿನಯ್ ಪಡೆಗೆ ಇನಿಂಗ್ಸ್ ಮುನ್ನಡೆ

ಸಾರಾಂಶ

ಇನ್ನು ಕರ್ನಾಟಕ ಎರಡನೇ ಇನಿಂಗ್ಸ್'ನಲ್ಲಿ ದಿಟ್ಟ ಹೆಜ್ಜೆಯಿಟ್ಟಿದ್ದು, ಆರ್. ಸಮರ್ಥ್ 22* ಹಾಗೂ ಕೆಎಲ್ ರಾಹುಲ್ 23* ಬ್ಯಾಟಿಂಗ್ ಮುಂದುವರೆಸಿದ್ದಾರೆ.  

ಶಿವಮೊಗ್ಗ(ಅ.25): ಯುವ ಲೆಗ್ ಸ್ಪಿನ್ನರ್ ಶ್ರೇಯಸ್ ಗೋಪಾಲ್ ಸ್ಪಿನ್ ಮೋಡಿಗೆ ತತ್ತರಿಸಿದ ಹೈದರಾಬಾದ್ ಕೇವಲ 136 ರನ್'ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಕರ್ನಾಟಕ 47 ರನ್'ಗಳ ಇನಿಂಗ್ಸ್ ಮುನ್ನಡೆ ಕಾಯ್ದುಕೊಂಡಿತು. ಆ ಬಳಿಕ ಎರಡನೇ ಇನಿಂಗ್ಸ್ ಆರಂಭಿಸಿದ ಕರ್ನಾಟಕ ಚಹಾ ವಿರಾಮದ ವೇಳೆಗೆ ವಿಕೆಟ್ ನಷ್ಟವಿಲ್ಲದೇ 45 ರನ್ ಕಲೆ ಹಾಕಿದ್ದು ಒಟ್ಟಾರೆ ಕರ್ನಾಟಕ 92 ರನ್'ಗಳ ಮುನ್ನಡೆ ಸಾಧಿಸಿದೆ.

ಮೊದಲ ದಿನದಂತ್ಯಕ್ಕೆ 53 ರನ್'ಗಳಿಗೆ 3 ವಿಕೆಟ್ ಕಳೆದುಕೊಂಡಿದ್ದ ಹೈದರಾಬಾದ್'ಗೆ ವಿಕೆಟ್ ಕೀಪರ್ ಬ್ಯಾಟ್ಸ್'ಮನ್ ಸುಮಂತ್(68) ಆಸರೆ ಯಾದರು. ಆದರೆ ಕರ್ನಾಟಕದ ಪರ ಮಿಂಚಿನ ದಾಳಿ ನಡೆಸಿದ ಶ್ರೇಯಸ್ ಗೋಪಾಲ್ ಹೈದರಾಬಾದ್ ಬ್ಯಾಟ್ಸ್'ಮನ್'ಗಳನ್ನು ಪೆವಿಲಿಯನ್ ಪರೇಡ್ ನಡೆಸುವಂತೆ ಮಾಡುವಲ್ಲಿ ಯಶಸ್ವಿಯಾದರು. ಗೋಪಾಲ್ ಕೇವಲ 17 ರನ್'ಗಳಿಗೆ 5 ವಿಕೆಟ್ ಕಬಳಿಸಿ ಮಿಂಚಿದರು.

ಇನ್ನು ಕರ್ನಾಟಕ ಎರಡನೇ ಇನಿಂಗ್ಸ್'ನಲ್ಲಿ ದಿಟ್ಟ ಹೆಜ್ಜೆಯಿಟ್ಟಿದ್ದು, ಆರ್. ಸಮರ್ಥ್ 22* ಹಾಗೂ ಕೆಎಲ್ ರಾಹುಲ್ 23* ಬ್ಯಾಟಿಂಗ್ ಮುಂದುವರೆಸಿದ್ದಾರೆ.  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026 ಡೆಲ್ಲಿ ಕ್ಯಾಪಿಟಲ್ಸ್‌ಗೆ ಹೊಸ ನಾಯಕ ಫಿಕ್ಸ್; ಅಕ್ಷರ್ ಪಟೇಲ್‌ಗೆ ಕ್ಯಾಪ್ಟನ್ಸಿಯಿಂದ ಗೇಟ್‌ಪಾಸ್?
ಧೋನಿಯನ್ನೇ ಬೆರಗುಗೊಳಿಸಿದ 4ರ ಪೋರಿಯ ಬ್ಯಾಟಿಂಗ್: ವೀಡಿಯೋ ವೈರಲ್