ಕನ್ನಡದ ಕಾಮನ್’ವೆಲ್ತ್ ವೀರನಿಗೆ ಇನ್ನೂ ಸಿಕ್ಕಿಲ್ಲ ಬಹುಮಾನ..!

Published : Jul 11, 2018, 06:05 PM ISTUpdated : Jul 11, 2018, 06:21 PM IST
ಕನ್ನಡದ ಕಾಮನ್’ವೆಲ್ತ್ ವೀರನಿಗೆ ಇನ್ನೂ ಸಿಕ್ಕಿಲ್ಲ ಬಹುಮಾನ..!

ಸಾರಾಂಶ

ಆಸ್ಟ್ರೇಲಿಯಾದ ಗೋಲ್ಡ್’ಕೋಸ್ಟ್’ನಲ್ಲಿ ನಡೆದ 21ನೇ ಆವೃತ್ತಿಯ ಕಾಮನ್’ವೆಲ್ತ್ ಗೇಮ್ಸ್’ನಲ್ಲಿ 56 ಕೆ.ಜಿ ವಿಭಾಗದಲ್ಲಿ ಗುರುರಾಜ್ ಪೂಜಾರಿ ಬೆಳ್ಳಿ ಪದಕ ಗೆಲ್ಲುವುದರೊಂದಿಗೆ ಭಾರತದ ಪರ ಮೊದಲ ದಿನವೇ ಪದಕದ ಖಾತೆ ತೆರೆದಿದ್ದರು.

ಬೆಂಗಳೂರು[ಜು.11]: 2018ರ ಕಾಮನ್’ವೆಲ್ತ್ ಗೇಮ್ಸ್’ನಲ್ಲಿ ಭಾರತದ ಪರ ಪದಕದ ಖಾತೆ ತೆರೆದಿದ್ದ ವೇಯ್ಟ್’ಲಿಫ್ಟರ್ ಗುರುರಾಜ್ ಪೂಜಾರಿ ಕರ್ನಾಟಕದ ಕೀರ್ತಿ ಪತಾಕೆ ಹಾರಿಸಿದ್ದರು. ಅವರ ಸಾಧನೆ ನೋಡಿ ಸರ್ಕಾರ ಘೋಷಿಸಿದ್ದ ಬಹುಮಾನ ಇನ್ನು ಕನಸಿನ ಮಾತಾಗಿಯೇ ಉಳಿದಿದೆ. 

ಹೌದು, ಆಸ್ಟ್ರೇಲಿಯಾದ ಗೋಲ್ಡ್’ಕೋಸ್ಟ್’ನಲ್ಲಿ ನಡೆದ 21ನೇ ಆವೃತ್ತಿಯ ಕಾಮನ್’ವೆಲ್ತ್ ಗೇಮ್ಸ್’ನಲ್ಲಿ 56 ಕೆ.ಜಿ ವಿಭಾಗದಲ್ಲಿ ಗುರುರಾಜ್ ಪೂಜಾರಿ ಬೆಳ್ಳಿ ಪದಕ ಗೆಲ್ಲುವುದರೊಂದಿಗೆ ಭಾರತದ ಪರ ಮೊದಲ ದಿನವೇ ಪದಕದ ಖಾತೆ ತೆರೆದಿದ್ದರು. ರಾಜ್ಯಸರ್ಕಾರದ ಪರವಾಗಿ ಅಂದಿನ ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ 25 ಲಕ್ಷ ಬಹುಮಾನ ನೀಡುವುದಾಗಿಯೂ ಘೋಷಿಸಿದ್ದರು. ಅದಾಗಿ ತಿಂಗಳುಗಳೇ ಕಳೆದಿದ್ದರೂ ಸರ್ಕಾರ ನೀಡಿದ ಭರವಸೆ ಈಡೇರಿಸಿಲ್ಲ ಎಂದು ಸುವರ್ಣನ್ಯೂಸ್ ಡಾಟ್ ಕಾಂ ನೊಂದಿಗೆ ಎಕ್ಸ್’ಕ್ಲೂಸಿವ್ ಆಗಿ ಮಾತನಾಡಿದ್ದಾರೆ. ಮುಂಬರುವ ಒಲಿಂಪಿಕ್ಸ್’ನಲ್ಲಿ ಪದಕ ಗೆಲ್ಲುವ ಕನಸು ಹೊತ್ತಿರುವ ಗುರುರಾಜ್ ಸರ್ಕಾರದ ನೆರವು ಹಾಗೂ ಪ್ರಾಯೋಜಕರ ನಿರೀಕ್ಷೆಯಲ್ಲಿದ್ದಾರೆ...

ಕನ್ನಡದ ಹೆಮ್ಮೆಯ ಕುವರ ಸುವರ್ಣನ್ಯೂಸ್ ಡಾಟ್ ಕಾಂ’ನೊಂದಿಗೆ ಎಕ್ಸ್’ಕ್ಲೂಸಿವ್ ಆಗಿ ಮಾತನಾಡಿದ್ದು ನೀವೊಮ್ಮೆ ಕೇಳಿ...

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಹೃತಿಕ್‌ ರೋಶನ್‌ 'ಕ್ರಿಶ್‌' ಸಿನಿಮಾದಲ್ಲಿ ಬಾಲನಟಿಯಾಗಿದ್ರಾ ಧೋನಿ ಪತ್ನಿ ಸಾಕ್ಷಿ?