ಮುಂಬೈ ಬಗ್ಗುಬಡಿದ ಕರ್ನಾಟಕ ಸೆಮಿಫೈನಲ್'ಗೆ ಲಗ್ಗೆ

Published : Dec 11, 2017, 10:52 AM ISTUpdated : Apr 11, 2018, 12:35 PM IST
ಮುಂಬೈ ಬಗ್ಗುಬಡಿದ ಕರ್ನಾಟಕ ಸೆಮಿಫೈನಲ್'ಗೆ ಲಗ್ಗೆ

ಸಾರಾಂಶ

ದ್ವಿತೀಯ ಇನಿಂಗ್ಸ್'ನಲ್ಲಿ ಕೆ. ಗೌತಮ್ ಅವರ ಮಾರಕ ದಾಳಿಗೆ ತತ್ತರಿಸಿದ 41 ಬಾರಿ ರಣಜಿ ಚಾಂಪಿಯನ್ ಮುಂಬೈ ಹೀನಾಯ ಸೋಲು ಕಂಡಿತು.

ನಾಗ್ಪುರ(ಡಿ.11): ಬಲಿಷ್ಟ ಮುಂಬೈ ತಂಡವನ್ನು ಇನಿಂಗ್ಸ್ ಹಾಗೂ 20 ರನ್'ಗಳಿಂದ ಬಗ್ಗು ಬಡಿದ ಕರ್ನಾಟಕ 2017-18ರ ರಣಜಿ ಟ್ರೋಫಿಯಲ್ಲಿ ಸೆಮಿಫೈನಲ್'ಗೆ ಲಗ್ಗೆಯಿಟ್ಟಿದೆ.

ದ್ವಿತೀಯ ಇನಿಂಗ್ಸ್'ನಲ್ಲಿ ಕೆ. ಗೌತಮ್ ಅವರ ಮಾರಕ ದಾಳಿಗೆ ತತ್ತರಿಸಿದ 41 ಬಾರಿ ರಣಜಿ ಚಾಂಪಿಯನ್ ಮುಂಬೈ ಹೀನಾಯ ಸೋಲು ಕಂಡಿತು.

ಮುಂಬೈ ಪರ ಸೂರ್ಯ ಕುಮಾರ್ ಯಾದವ್(108), ಆಕಾಶ್ ಪಾರ್ಕರ್(65) ಹಾಗೂ ಶಿವಂ ದುಬೈ(71) ಹೊರತು ಪಡಿಸಿದಂತೆ ಉಳಿದ ಬ್ಯಾಟ್ಸ್'ಮನ್'ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ. ಕರ್ನಾಟಕ ಪರ ಗೌತಮ್ 104 ರನ್ ನೀಡಿ 6 ವಿಕೆಟ್ ಪಡೆದು ಮಿಂಚಿದರು. ಮೊದಲ ಇನಿಂಗ್ಸ್'ನಲ್ಲಿ ಹ್ಯಾಟ್ರಿಕ್'ನೊಂದಿಗೆ 6 ವಿಕೆಟ್ ಪಡೆದಿದ್ದ ನಾಯಕ ವಿನಯ್ ಕುಮಾರ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

ಸಂಕ್ಷಿಪ್ತ ಸ್ಕೋರ್:

ಮುಂಬೈ: 173&377

ಕರ್ನಾಟಕ: 570/10

ಫಲಿತಾಂಶ: ಕರ್ನಾಟಕಕ್ಕೆ ಇನಿಂಗ್ಸ್ ಹಾಗೂ 20 ರನ್'ಗಳಿಂದ ಜಯ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?