
ಕೋಲ್ಕತಾ(ಜ.25): ಮಯಾಂಕ್ ಅಗರ್'ವಾಲ್ರ ಆಕರ್ಷಕ ಅರ್ಧಶತಕ ನೆರವಿನಿಂದ ಸಯ್ಯದ್ ಮುಷ್ತಾಕ್ ಅಲಿ ಸೂಪರ್ ಲೀಗ್ ನಾಕೌಟ್'ನ ಕೊನೆ ಪಂದ್ಯದಲ್ಲಿ ಮುಂಬೈ ವಿರುದ್ಧ ಕರ್ನಾಟಕ 7 ವಿಕೆಟ್'ಗಳ ಭರ್ಜರಿ ಜಯ ಸಾಧಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಮುಂಬೈ ಸಿದ್ದೇಶ್ ಲಾಡ್ ಹಾಗೂ ಸೂರ್ಯಕುಮಾರ್ ಯಾದವ್ ಅವರ ಸ್ಫೋಟಕ ಅರ್ಧಶತಕಗಳ ನೆರವಿನಿಂದ ನಿಗದಿತ 20 ಓವರ್'ಗಳಲ್ಲಿ 8 ವಿಕೆಟ್ ಕಳೆದುಕೊಂಡು 175 ರನ್'ಗಳ ಸವಾಲಿನ ಮೊತ್ತ ಕಲೆಹಾಕಿತು. ಕರ್ನಾಟಕ ಪರ ಬಿನ್ನಿ 3 ವಿಕೆಟ್ ಪಡೆದರೆ, ಶ್ರೇಯಸ್ ಗೋಪಾಲ್ 2 ಹಾಗೂ ಪ್ರಸಿದ್ದ ಕ್ರಿಷ್ಣ ಹಾಗೂ, ಮಿಥುನ್ ತಲಾ 1 ವಿಕೆಟ್ ಪಡೆದರು.
ಮುಂಬೈ ನೀಡಿದ ಗುರಿ ಬೆನ್ನಟ್ಟಿದ ಕರ್ನಾಟಕ ಕೇವಲ 3 ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು. ಆರಂಭಿಕ ಬ್ಯಾಟ್ಸ್'ಮನ್ ಆರ್. ಸಮರ್ಥ್ ಮತ್ತೊಮ್ಮೆ ವಿಫಲವಾದರು. ಆದರೆ ಮತ್ತೋರ್ವ ಆರಂಭಿಕ ಮಯಾಂಕ್ ಅಗರ್'ವಾಲ್(77) ಹಾಗೂ ಪವನ್ ದೇಶ್'ಪಾಂಡೆ(48*) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ತಂಡವನ್ನು ಸುಲಭವಾಗಿ ಗೆಲುವಿನ ದಡ ಸೇರಿಸಿದರು.
ಇನ್ನು ನಾಳೆ ನಡೆಯಲಿರುವ(ಜ.26) ಫೈನಲ್'ನಲ್ಲಿ ದೆಹಲಿ ಹಾಗೂ ರಾಜಸ್ಥಾನ ತಂಡಗಳು ಪ್ರಶಸ್ತಿಗಾಗಿ ಕಾದಾಡಲಿವೆ.
ಸಂಕ್ಷಿಪ್ತ ಸ್ಕೋರ್:
ಮುಂಬೈ: 175/8
ಸೂರ್ಯಕುಮಾರ್ ಯಾದವ್: 59
ಬಿನ್ನಿ: 36/3
ಕರ್ನಾಟಕ: 176/3
ಅಗರ್'ವಾಲ್: 77
ಧವಳ್ ಕುಲಕರ್ಣಿ: 36/2
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.