
ಬೆಂಗಳೂರು(ಅ.02): ಮನೀಶ್ ಪಾಂಡೆ ಭರ್ಜರಿ ಶತಕ ಹಾಗೂ ಕೆಎಲ್ ರಾಹುಲ್ ಅರ್ಧಶತಕದ ನೆರವಿನಿಂದ ಚತ್ತಿಸ್ಗಡ ವಿರುದ್ದ ನಡೆದ ವಿಜಯ್ ಹಜಾರೆ ಟೂರ್ನಿಯಲ್ಲಿ ಕರ್ನಾಟಕ 79 ರನ್ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಆಡಿದ 4 ಪಂದ್ಯದಲ್ಲಿ 3 ಗೆಲುವು ಸಾಧಿಸೋ ಮೂಲಕ ಎಲೈಟ್ ಪೂಲ್ ಗುಂಪಿನಲ್ಲಿ ಮೊದಲ ಸ್ಥಾನ ಅಲಂಕರಿಸಿದೆ.
ಇದನ್ನೂ ಓದಿ: ರೋಹಿತ್ ಒಂದು ಶತಕ; ಹಲವಾರು ದಾಖಲೆ ನಿರ್ಮಾಣ..!
ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ 7 ವಿಕೆಟ್ ನಷ್ಟಕ್ಕೆ 285 ರನ್ ಸಿಡಿಸಿತು. ಕೆಎಲ್ ರಾಹುಲ್ 81 ರನ್ ಸಿಡಿಸಿದರೆ, ಮನೀಶ್ ಪಾಂಡೆ 142 ರನ್ ಚಚ್ಚಿದರು. ಇವರಿಬ್ಬರ ಸ್ಫೋಟಕ ಬ್ಯಾಟಿಂಗ್ ನಿಂದ ಕರ್ನಾಟಕ ಉತ್ತಮ ಮೊತ್ತ ಪೇರಿಸಿತು.
ಇದನ್ನೂ ಓದಿ: BCCI ನೊಟೀಸ್ ಬೆನ್ನಲ್ಲೇ CACಗೆ ಕಪಿಲ್ ದೇವ್ ರಾಜಿನಾಮೆ!
286 ರನ್ ಗುರಿ ಪಡೆದ ಚತ್ತೀಸ್ಗಡ ತಂಡಕ್ಕೆ ಪ್ರಸಿದ್ಧ ಕೃಷ್ಣ ಹಾಗೂ ಶ್ರೇಯಸ್ ಗೋಪಾಲ್ ಶಾಕ್ ನೀಡಿದರು. ಇಬ್ಬರು ತಲಾ 3 ವಿಕೆಟ್ ಪಡೆದರೆ, ರೋನಿತ್ ಮೊರೆ 2 ವಿಕೆಟ್ ಕಬಳಿಸಿದರು. ಕರ್ನಾಟಕ ತಂಡದ ಅತ್ಯುತ್ತಮ ದಾಳಿಗೆ ಕುಸಿದ ಚತ್ತೀಸ್ಗಡ 44.4 ಓವರ್ಗಳಲ್ಲಿ 206 ರನ್ಗೆ ಆಲೌಟ್ ಆಯಿತು. ಇದರೊಂದಿಗೆ ಕರ್ನಾಟಕ 79 ರನ್ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಕರ್ನಾಟಕ 4 ಅಂಕ ಪಡೆಯಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.