ಮೈಸೂರು ವಾರಿಯರ್ಸ್'ಗೆ ಕರುಣ್ ನಾಯಕ

Published : Aug 11, 2017, 03:54 PM ISTUpdated : Apr 11, 2018, 01:04 PM IST
ಮೈಸೂರು ವಾರಿಯರ್ಸ್'ಗೆ ಕರುಣ್ ನಾಯಕ

ಸಾರಾಂಶ

ಆಗಸ್ಟ್ ತಿಂಗಳಾಂತ್ಯಕ್ಕೆ ಕರುಣ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಮೈಸೂರು ತಂಡದ ಮಾಲೀಕರು ತಿಳಿಸಿದ್ದಾರೆ.

ಬೆಂಗಳೂರು(ಆ.11): ಮುಂದಿನ ತಿಂಗಳು 1ರಿಂದ ಆರಂಭವಾಗಲಿರುವ ಕರ್ನಾಟಕ ಪ್ರೀಮಿಯರ್ ಲೀಗ್ ಟಿ20 ಆರನೇ ಆವೃತ್ತಿಯಲ್ಲಿ ಮೈಸೂರು ವಾರಿಯರ್ಸ್ ತಂಡವನ್ನು ಕರುಣ್ ನಾಯರ್ ಮುನ್ನಡೆಸಲಿದ್ದಾರೆ.

ಭಾರತ ತಂಡದ ಆಟಗಾರ ಕರುಣ್, 2017ರ ಐಪಿಎಲ್'ನಲ್ಲಿ ಡೆಲ್ಲಿ ಡೇರ್'ಡೆವಿಲ್ಸ್ ತಂಡವನ್ನು ಕೆಲ ಪಂದ್ಯಗಳ ಮಟ್ಟಿಗೆ ಮುನ್ನಡೆಸಿದ್ದರು. ಭಾರತ 'ಎ' ಟೆಸ್ಟ್ ತಂಡದ ನಾಯಕರಾಗಿರುವ ಕರುಣ್, ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದು, ಆತಿಥೇಯ ತಂಡದ ವಿರುದ್ಧ ನಾಲ್ಕು ದಿನಗಳ ಎರಡು ಟೆಸ್ಟ್ ಪಂದ್ಯಗಳನ್ನಾಡಲಿದ್ದಾರೆ.

ಆಗಸ್ಟ್ ತಿಂಗಳಾಂತ್ಯಕ್ಕೆ ಕರುಣ್ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಮೈಸೂರು ತಂಡದ ಮಾಲೀಕರು ತಿಳಿಸಿದ್ದಾರೆ. ಆಗಸ್ಟ್ 14ರಿಂದ ಮೈಸೂರು ವಾರಿಯರ್ಸ್ ತಂಡ ಅಭ್ಯಾಸ ಶಿಬಿರ ಆರಂಭಿಸಲಿದೆ.  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ಕಿಲೋಮೀಟರ್ ಸೈಕಲ್‌ನಲ್ಲಿ ಸ್ಟೇಡಿಯಂಗೆ ಬರುತ್ತಿದ್ದ ಆಟಗಾರನಿಗೆ ಸಿಕ್ತು 14 ಕೋಟಿ ನಗದು! ಇದು ಐಪಿಎಲ್ ಜಾದೂ
ಮಿನಿ ಹರಾಜಿನ ಬೆನ್ನಲ್ಲೇ KKR ತಂಡಕ್ಕೆ ಬಿಗ್ ಶಾಕ್! ₹9.2 ಕೋಟಿ ನೀಡಿ ಖರೀದಿಸಿದ ಈ ಸ್ಟಾರ್ ಕ್ರಿಕೆಟಿಗ ಐಪಿಎಲ್ ಆಡೋದೇ ಡೌಟ್!