
ಮುಂಬೈ(ಸೆ.11): ನ್ಯೂಜಿಲೆಂಡ್ ‘ಎ’ ವಿರುದ್ಧ ಸೆ.23ರಿಂದ ಆರಂಭಗೊಳ್ಳಲಿರುವ ಎರಡು 4 ದಿನಗಳ ಟೆಸ್ಟ್ ಪಂದ್ಯಕ್ಕೆ ಬಿಸಿಸಿಐ ತಂಡ ಪ್ರಕಟಿಸಲಾಗಿದ್ದು, ಕರ್ನಾಟಕದ ಕರುಣ್ ನಾಯರ್'ಗೆ ನಾಯಕತ್ವ ನೀಡಲಾಗಿದೆ.
ಇನ್ನು ರಾಜ್ಯದ ಆರ್.ಸಮರ್ಥ್, ಹಾಗೂ ಕೆ.ಗೌತಮ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಸಫಲವಾಗಿದ್ದಾರೆ.
ವಿಜಯವಾಡದಲ್ಲಿ ಪಂದ್ಯಗಳು ನಡೆಯಲಿದ್ದು, ಮೊದಲ ಅಭ್ಯಾಸ ಪಂದ್ಯ ಸೆಪ್ಟೆಂಬರ್ 23-26ರವರೆಗೆ ನಡೆಯಲಿದೆ. ಇನ್ನು ಎರಡನೇ ಪಂದ್ಯ ಸೆಪ್ಟೆಂಬರ್ 30-ಅಕ್ಟೋಬರ್ 3ರವರೆಗೆ ನಡೆಯಲಿದೆ.
ತಂಡದ ವಿವರ:
ಕರುಣ್ ನಾಯರ್ (ನಾಯಕ), ಪ್ರಿಯಾಂಕ್ ಪಾಂಚಾಲ್, ಆರ್. ಸಮರ್ಥ್, ಸುದೀಪ್ ಚಟರ್ಜಿ, ಶ್ರೇಯಸ್ ಅಯ್ಯರ್, ಅಂಕಿತ್ ಭಾವ್ನೆ, ಹನುಮ ವಿಹಾರಿ, ರಿಶಭ್ ಪಂತ್, ಶಹಬಾದ್ ನದೀಮ್, ಕೆ. ಗೌತಮ್, ನವ್ದೀಪ್ ಶೈನಿ, ಶಾರ್ದೂಲ್ ಠಾಕೂರ್,ಮೊಹ್ಮದ್ ಸಿರಾಜ್, ಅಂಕಿತ್ ರಜಪೂತ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.