
ಬೆಂಗಳೂರು(ಮಾ.01): ವಿಜಯ್ ಹಜಾರೆ ಟ್ರೋಫಿ ಗೆದ್ದು ದೇವಧರ್ ಟ್ರೋಫಿಗೆ ಅರ್ಹತೆ ಪಡೆದ ಕರ್ನಾಟಕ ತಂಡವನ್ನು, ಪಂದ್ಯಾವಳಿಯಲ್ಲಿ ಕರುಣ್ ನಾಯರ್ ಮುನ್ನಡೆಸಲಿದ್ದಾರೆ.
ಇತ್ತೀಚೆಗಷ್ಟೇ ಸೌರಾಷ್ಟ್ರ ತಂಡವನ್ನು ಮಣಿಸಿ ಕರ್ನಾಟಕ ವಿಜಯ್ ಹಜಾರೆ ಟ್ರೋಫಿಯಲ್ಲಿ ಮೂರನೇ ಬಾರಿಗೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಗಾಯದಿಂದಾಗಿ ವಿನಯ್ ಕುಮಾರ್ ಕಳೆದ ಟೂರ್ನಿಯ ಮಧ್ಯದಲ್ಲೇ ಹೊರಗುಳಿದಿದ್ದರು. ವಿನಯ್ ಅನುಪಸ್ಥಿತಿಯಲ್ಲಿ ರಾಜ್ಯ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಕರುಣ್ ನಾಯರ್ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸುವಲ್ಲಿ ಸಫಲವಾಗಿದ್ದರು.
ತಂಡ: ಕರುಣ್ (ನಾಯಕ),ಮಯಾಂಕ್, ಸಮರ್ಥ್, ಅಭಿಷೇಕ್, ಬಿನ್ನಿ, ಸಿ.ಎಂ.ಗೌತಮ್, ಪವನ್, ಕೆ.ಗೌತಮ್, ಶ್ರೇಯಸ್, ಪ್ರಸಿದ್ಧ್, ಮಿಥುನ್, ರೋನಿತ್, ಸುಚಿತ್, ಪ್ರದೀಪ್, ಶರತ್.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.