ಕೊನೆ ಟಿ20 ಪಂದ್ಯಕ್ಕೂ ಮುನ್ನ ಆದ ಯಡವಟ್ಟು ನಿಮಗೇನಾದ್ರೂ ಗೊತ್ತಾಯ್ತಾ..?

Published : Nov 10, 2017, 03:28 PM ISTUpdated : Apr 11, 2018, 12:45 PM IST
ಕೊನೆ ಟಿ20 ಪಂದ್ಯಕ್ಕೂ ಮುನ್ನ ಆದ ಯಡವಟ್ಟು ನಿಮಗೇನಾದ್ರೂ ಗೊತ್ತಾಯ್ತಾ..?

ಸಾರಾಂಶ

ಮಳೆಯಿಂದಾದ ಅಡಚಣೆಯಿಂದಾಗಿ ಪಂದ್ಯ ನಡೆಯುವುದು ಅನುಮಾನವೆನಿಸಿತ್ತು. ಆದರೆ, ಮೈದಾನದ ಗ್ರೌಂಡ್'ಮೆನ್ಸ್'ಗಳು ಚುರುಕಿನ ಕೆಲಸ ಮಾಡಿದ್ದರಿಂದ ಪಂದ್ಯ ನಡೆಯಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.

ತಿರುವನಂತಪುರಂ(ನ.10): ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆಗಳನ್ನು ಹಾಡುವುದು ಮರೆತೆವು. ಇದಕ್ಕಾಗಿ ಕ್ಷಮೆ ಕೇಳುತ್ತೇವೆ ಎಂದು ಕೇರಳ ಕ್ರಿಕೆಟ್ ಸಂಸ್ಥೆ ಹೇಳಿದೆ.

ಮಳೆಯಿಂದಾಗಿ ಪಂದ್ಯ ಆರಂಭಗೊಳ್ಳುವುದು ತಡವಾಯಿತು. ‘ಎಷ್ಟು ಸಾಧ್ಯವೋ ಅಷ್ಟು ಬೇಗ ಪಂದ್ಯವನ್ನು ಆರಂಭಿಸುವ ಭರದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್‌'ನ ರಾಷ್ಟ್ರಗೀತೆಯನ್ನು ಮರೆತು ಬಿಟ್ಟೆವು’ ಎಂದು ಕೆಸಿಎ ಕಾರ್ಯದರ್ಶಿ ಜಯೇಶ್ ಜಾರ್ಜ್ ಹೇಳಿದ್ದಾರೆ.

ಆಟಗಾರರಾಗಲೀ, ಮ್ಯಾಚ್ ಅಧಿಕಾರಿಗಳಾಗಲಿ ನಮಗೆ ಇದನ್ನು ನೆನಪಿಸಿಲ್ಲ. ಇದೊಂದು ಗಂಭೀರ ಪ್ರಮಾಧವಾಗಿದ್ದು, ಈ ಬಗ್ಗೆ ದೇಶದ ಕ್ಷಮೆ ಕೋರುವುದಾಗಿ ಜಯೇಶ್ ಹೇಳಿದ್ದಾರೆ. ಇದೇ ವೇಳೆ ಶ್ರೀಶಾಂತ್‌'ಗೆ ಕೇರಳ ಕ್ರಿಕೆಟ್ ಸಂಸ್ಥೆ ಆಹ್ವಾನ ನೀಡಿತ್ತು. ಆದರೆ ಅವರು ಆಗಮಿಸಲಿಲ್ಲ ಎಂದು ಜಾರ್ಜ್ ಹೇಳಿದ್ದಾರೆ.

ಮಳೆಯಿಂದಾದ ಅಡಚಣೆಯಿಂದಾಗಿ ಪಂದ್ಯ ನಡೆಯುವುದು ಅನುಮಾನವೆನಿಸಿತ್ತು. ಆದರೆ, ಮೈದಾನದ ಗ್ರೌಂಡ್'ಮೆನ್ಸ್'ಗಳು ಚುರುಕಿನ ಕೆಲಸ ಮಾಡಿದ್ದರಿಂದ ಪಂದ್ಯ ನಡೆಯಲು ಸಾಧ್ಯವಾಯಿತು ಎಂದು ಹೇಳಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಿಂಬಾಬ್ವೆ ವಿರುದ್ಧ T20 ಸರಣಿ ಕ್ಲೀನ್ ಸ್ವೀಪ್ ಬೆನ್ನಲ್ಲೇ ಟೀಮ್ ಇಂಡಿಯಾ ಕೋಚ್ ಗಂಭೀರ್ ಗೆ ಶುರುವಾಯ್ತು ಹೊಸ ಟೆನ್ಷನ್?
ವೈಭವ್ ಸೂರ್ಯವಂಶಿ ಅಬ್ಬರ, ಜಿಂಬಾಬ್ವೆ ವಿರುದ್ಧ ಟಿ20 ಸರಣಿಯಲ್ಲಿ ಭಾರತಕ್ಕೆ ಕ್ಲೀನ್ ಸ್ವೀಪ್ ಗೆಲುವು