
ಮುಂಬೈ(ಅ.12): ಭಾರತದ ಬ್ಯಾಟ್ಸ್ಮನ್ ಕೇದಾರ್ ಜಾಧವ್, ವನಿತೆಯರ ತಂಡದ ಆಟಗಾರ್ತಿ ಸ್ಮೃತಿ ಮಂದಾನಾಗೆ ವರ್ಷದ ಕ್ರಿಕೆಟಿಗರು ಎಂಬ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಅಲ್ಲದೇ ಹಾಕಿ ತಂಡದ ಗೋಲ್ ಕೀಪರ್ ಆಕಾಶ್ ಚಿಕ್ಟೆ ಮತ್ತು ಗ್ರ್ಯಾಂಡ್ ಮಾಸ್ಟರ್ ವಿದಿತ್ ಸಂತೋಷ್ ಗುಜರಾತಿ ಅವರು ವರ್ಷದ ಕ್ರೀಡಾ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಇಲ್ಲಿನ ಕ್ರೀಡಾ ವರದಿಗಾರರ ಸಂಸ್ಥೆ, ಇದೇ ಅ.23 ರಂದು ಕ್ರೀಡಾ ಸಾಧಕರಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದೆ.
ಇನ್ನು ಮುಂಬೈ ರಣಜಿ ತಂಡದ ಅನುಭವಿ ಆಲ್ರೌಂಡರ್ ಅಭಿಷೇಕ್ ನಾಯರ್, ವರ್ಷದ ರಣಜಿ ಕ್ರಿಕೆಟಿಗ ಪ್ರಶಸ್ತಿಗೆ ಪಾತ್ರವಾದರೆ, ಮುಂಬೈ ಯುವ ಪ್ರತಿಭೆ ಪೃಥ್ವಿ ಶಾ ವರ್ಷದ ಯುವ ಕ್ರಿಕೆಟಿಗ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಹಾಗೆಯೇ 10ನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ತಂಡವಾದ ಮುಂಬೈ ಇಂಡಿಯನ್ಸ್ ವರ್ಷದ ತಂಡ ಪ್ರಶಸ್ತಿಗೆ ಪಾತ್ರವಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.