
ತಿರುವನಂತಪುರಂ(ಅ.31): ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್.ಧೋನಿ ಬ್ಯಾಟಿಂಗ್ನಲ್ಲಿ ಫಾರ್ಮ್ ಸಮಸ್ಯೆ ಎದುರಿಸುತ್ತಿದ್ದಾರೆ. ಆದರೆ ಧೋನಿ ಮಿಂಚಿನ ವೇಗದ ಕೀಪಿಂಗ್ ಹಾಗೂ ಫಿಟ್ನೆಸ್ನಲ್ಲಿ ಧೋನಿ ಯಾವುತ್ತೂ ಹಿಂದೆ ಬಿದ್ದಿಲ್ಲ. ಇದೀಗ 5ನೇ ಏಕದಿನ ಪಂದ್ಯಕ್ಕಾಗಿ ಕೇರಳಕ್ಕೆ ಆಗಮಿಸಿದ ಧೋನಿಗೆ ಅದ್ಧೂರಿ ಸ್ವಾಗತ ಸಿಕ್ಕಿದೆ.
ವೆಸ್ಟ್ ಇಂಡೀಸ್ ವಿರುದ್ಧದ 5ನೇ ಹಾಗೂ ಅಂತಿಮ ಏಕದಿನ ಪಂದ್ಯಕ್ಕಾಗಿ ಟೀಂ ಇಂಡಿಯಾ ಕೇರಳದ ತಿರುವನಂತಪುರಂಗೆ ಬಂದಿಳಿದಿದೆ. ಕೇರಳದ ಧೋನಿ ಅಭಿಮಾನಿಗಳು ದಿಗ್ಗಜ ಕ್ರಿಕೆಟಿಗನಿಗೆ ಅದ್ಧೂರಿ ಸ್ವಾಗತ ನೀಡಿದ್ದಾರೆ. 35 ಅಡಿ ಎತ್ತರದ ಧೋನಿ ಕಟೌಟ್ ನಿರ್ಮಿಸಿ ಧೋನಿಗ ಸ್ವಾಗತ ನೀಡಿದ್ದಾರೆ.
ವೆಸ್ಟ್ ಇಂಡೀಸ್ಹಾಗೂ ಟಿ20 ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟಿ20 ಪಂದ್ಯದಿಂದ ಧೋನಿಯಿಂದ ಹೊರಗಿಡಲಾಗಿದೆ. ಜನವರಿಯಲ್ಲಿ ನಡೆಯಲಿರುವ ಆಸಿಸ್ ವಿರುದ್ಧದ ಏಕದಿನ ಸರಣಿಗೆ ಧೋನಿ ಕಮ್ಬ್ಯಾಕ್ ಮಾಡಲಿದ್ದಾರೆ. ನಾಳಿನ(ನ.1)ರ ಪಂದ್ಯ ಹೊರತು ಪಡಿಸಿದರೆ, ಮುಂದಿನ ವರ್ಷ ಜನವರಿವರೆಗೆ ಧೋನಿ ಮೈದಾನದಲ್ಲಿ ಕಾಣಿಸಿಕೊಳ್ಳಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.