
ತಿರುವನಂತಪುರಂ(ಜು.12): ಇತ್ತೀಚೆಗೆ ಮುಕ್ತಾಯಗೊಂಡ 22ನೇ ಏಷ್ಯನ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಪದಕ ಗೆದ್ದ ರಾಜ್ಯದ ಅಥ್ಲೀಟ್'ಗಳಿಗೆ ಕೇರಳ ಸರ್ಕಾರ ನಗದು ಬಹುಮಾನ ಘೋಷಿಸಿದೆ.
ಚಿನ್ನದ ಪದಕ ಗೆದ್ದವರಿಗೆ ₹10 ಲಕ್ಷ, ಬೆಳ್ಳಿ ಗೆದ್ದವರಿಗೆ ₹7 ಲಕ್ಷ ಹಾಗೂ ಕಂಚಿನ ಪದಕ ಗೆದ್ದ ಅಥ್ಲೀಟ್'ಗಳಿಗೆ ₹5 ಲಕ್ಷ ಬಹುಮಾನ ನೀಡಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಇನ್ನು ತಂಡಗಳ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದವರಿಗೆ ₹5 ಲಕ್ಷ, ಬೆಳ್ಳಿ ಗೆದ್ದವರಿಗೆ ₹3.5 ಹಾಗೂ ಕಂಚಿನ ಪದಕ ಗೆದ್ದ ಅಥ್ಲೀಟ್'ಗಳಿಗೆ ₹2.5 ಲಕ್ಷ ನೀಡುವುದಾಗಿ ಕೇರಳ ಸರ್ಕಾರದ ಪ್ರಕಟಣೆ ತಿಳಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.