ಸಯ್ಯದ್‌ ಮೋದಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ ಟೂರ್ನಿ: ಮೊದಲ ಸುತ್ತಲ್ಲೇ ಕಿದಂಬಿ ಶ್ರೀಕಾಂತ್‌ ಔಟ್‌

Published : Nov 30, 2023, 10:34 AM IST
ಸಯ್ಯದ್‌ ಮೋದಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ ಟೂರ್ನಿ: ಮೊದಲ ಸುತ್ತಲ್ಲೇ ಕಿದಂಬಿ ಶ್ರೀಕಾಂತ್‌ ಔಟ್‌

ಸಾರಾಂಶ

ಮಾಜಿ ವಿಶ್ವ ನಂ.1 ಶ್ರೀಕಾಂತ್‌ ತೈವಾನ್‌ನ ಚಿಯಾ ಹೊ ಲೀ ವಿರುದ್ಧ 21-23, 8-21 ಗೇಮ್‌ಗಳಲ್ಲಿ ಪರಾಭವಗೊಂಡರು. ಇದೇ ವೇಳೆ ಮಹಿಳಾ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲಿ 16 ವರ್ಷದ ಉನ್ನತಿ ಹೂಡಾ ಭಾರತದವರೇ ಆದ ಆಕರ್ಷಿ ಕಶ್ಯಪ್‌ ವಿರುದ್ಧ ಗೆದ್ದು 2ನೇ ಸುತ್ತಿಗೇರಿದರು.

ಲಖನೌ: ಸಯ್ಯದ್‌ ಮೋದಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಭಾರತದ ತಾರಾ ಶಟ್ಲರ್‌ ಕಿದಂಬಿ ಶ್ರೀಕಾಂತ್‌ ಮೊದಲ ಸುತ್ತಿನಲ್ಲೇ ಸೋತು ಹೊರಬಿದ್ದಿದ್ದಾರೆ. ಮಾಜಿ ವಿಶ್ವ ನಂ.1 ಶ್ರೀಕಾಂತ್‌ ತೈವಾನ್‌ನ ಚಿಯಾ ಹೊ ಲೀ ವಿರುದ್ಧ 21-23, 8-21 ಗೇಮ್‌ಗಳಲ್ಲಿ ಪರಾಭವಗೊಂಡರು. ಇದೇ ವೇಳೆ ಮಹಿಳಾ ಸಿಂಗಲ್ಸ್‌ನ ಮೊದಲ ಸುತ್ತಿನಲ್ಲಿ 16 ವರ್ಷದ ಉನ್ನತಿ ಹೂಡಾ ಭಾರತದವರೇ ಆದ ಆಕರ್ಷಿ ಕಶ್ಯಪ್‌ ವಿರುದ್ಧ ಗೆದ್ದು 2ನೇ ಸುತ್ತಿಗೇರಿದರು.

ಟೋಟನ್‌ಹ್ಯಾಮ್ ಜತೆ ಬೆಂಗ್ಳೂರಿನ ಕಿಕ್‌ಸ್ಟಾರ್ಟ್‌ ಎಫ್‌ಸಿ ಸಹಭಾಗಿತ್ವ

ಬೆಂಗಳೂರು: ಕರ್ನಾಟಕದ ಜನಪ್ರಿಯ ಫುಟ್ಬಾಲ್‌ ಕ್ಲಬ್‌ಗಳಲ್ಲಿ ಒಂದಾದ ಕಿಕ್‌ಸ್ಟಾರ್ಟ್‌ ಎಫ್‌ಸಿ, ಇಂಗ್ಲಿಷ್‌ ಪ್ರೀಮಿಯರ್‌ ಲೀಗ್‌ನ ಪ್ರಸಿದ್ಧ ಕ್ಲಬ್‌ಗಳಲ್ಲಿ ಒಂದಾದ ಟೋಟನ್‌ಹ್ಯಾಮ್‌ ಹಾಟ್‌ಸ್ಪರ್‌ ಜೊತೆ ಸಹಭಾಗಿತ್ವಕ್ಕೆ ಸಹಿ ಹಾಕಿದೆ. ಟೋಟನ್‌ಹ್ಯಾಮ್‌ನ ರಾಯಭಾರಿಗಳಾದ ಲೆಡ್ಲಿ ಕಿಂಗ್ ಮತ್ತು ಓಸ್ವಾಲ್ಡೊ ಆರ್ಡಿಲ್ಸ್ ನಗರಕ್ಕೆ ಆಗಮಿಸಿ ಒಪ್ಪಂದಕ್ಕೆ ಸಹಿ ಹಾಕಿದರು. ಜಾಗತಿಕ ಮಟ್ಟದಲ್ಲಿ ರಾಜ್ಯದ ಆಟಗಾರರು ಗುರುತಿಸಿಕೊಳ್ಳಲು ಈ ಸಹಭಾಗಿತ್ವ ನೆರವಾಗಲಿದೆ ಎಂದು ಕಿಕ್‌ಸ್ಟಾರ್ಟ್‌ ಎಫ್‌ಸಿ ಆಡಳಿತ ಮಂಡಳಿ ಭರವಸೆ ವ್ಯಕ್ತಪಡಿಸಿದೆ.

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ ಆಯ್ಕೆ ಇಂದು; ರೋಹಿತ್ ಶರ್ಮಾ ಲಭ್ಯತೆ ಅನುಮಾನ?

ರಾಷ್ಟ್ರೀಯ ಫುಟ್ಬಾಲ್‌: ಇಂದು ಕರ್ನಾಟಕ vs ಕೇರಳ

ಬೆಂಗಳೂರು: ರಾಷ್ಟ್ರೀಯ ಮಹಿಳಾ ಫುಟ್ಬಾಲ್‌ ಟೂರ್ನಿಯಲ್ಲಿ ಫೈನಲ್‌ ಸುತ್ತಿಗೇರುವ ಗುರಿಯೊಂದಿಗೆ ಕಣಕ್ಕಿಳಿದಿರುವ ಕರ್ನಾಟಕ, ಗುರುವಾರ ಗುಂಪು ಹಂತದ ತನ್ನ 4ನೇ ಪಂದ್ಯದಲ್ಲಿ ಕೇರಳ ವಿರುದ್ಧ ಸೆಣಸಲಿದೆ. ಆಡಿರುವ 3 ಪಂದ್ಯಗಳಲ್ಲಿ 2 ಗೆಲುವು, 1 ಡ್ರಾನೊಂದಿಗೆ 7 ಅಂಕ ಕಲೆಹಾಕಿ ‘ಸಿ’ ಗುಂಪಿನಲ್ಲಿ ಮೊದಲ ಸ್ಥಾನದಲ್ಲಿರುವ ಕರ್ನಾಟಕ ಮತ್ತೊಂದು ಜಯದೊಂದಿಗೆ ಅಗ್ರಸ್ಥಾನ ಕಾಯ್ದುಕೊಳ್ಳಲು ಎದುರು ನೋಡುತ್ತಿದೆ.

ಕೇರಳ ಆಡಿರುವ 3 ಪಂದ್ಯಗಳಲ್ಲಿ ಕೇವಲ 1ರಲ್ಲಿ ಗೆದ್ದಿದ್ದು, 2 ಪಂದ್ಯಗಳನ್ನು ಸೋತಿದೆ. ಗುರುವಾರ ಬೆಂಗಳೂರಲ್ಲಿ ‘ಸಿ’ ಗುಂಪಿನ ಮತ್ತೆರಡು ಪಂದ್ಯಗಳು ನಡೆಯಲಿದ್ದು, ತ್ರಿಪುರಾ-ಚಂಡೀಗಢ ಹಾಗೂ ಅಸ್ಸಾಂ-ಸಿಕ್ಕಿಂ ತಂಡಗಳು ಮುಖಾಮುಖಿಯಾಗಲಿವೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

'ಈ ಕ್ರಿಕೆಟಿಗನ ವೃತ್ತಿ ಬದುಕು ಹಾಳು ಮಾಡಿದ್ರಾ ಧೋನಿ?' ನಿವೃತ್ತಿ ಬೆನ್ನಲ್ಲೇ ತುಟಿಬಿಚ್ಚಿದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ!
IPL 2026 ಡೆಲ್ಲಿ ಕ್ಯಾಪಿಟಲ್ಸ್‌ಗೆ ಹೊಸ ನಾಯಕ ಫಿಕ್ಸ್; ಅಕ್ಷರ್ ಪಟೇಲ್‌ಗೆ ಕ್ಯಾಪ್ಟನ್ಸಿಯಿಂದ ಗೇಟ್‌ಪಾಸ್?