ಈ ಬಾರಿ ಕೆಕೆಆರ್'ಗೆ ನೂತನ ಸಾರಥಿ

Published : Mar 04, 2018, 11:42 AM ISTUpdated : Apr 11, 2018, 12:57 PM IST
ಈ ಬಾರಿ ಕೆಕೆಆರ್'ಗೆ ನೂತನ ಸಾರಥಿ

ಸಾರಾಂಶ

ಬಾಲಿವುಡ್ ನಟ ಶಾರೂಕ್ ಖಾನ್ ಮಾಲಿಕತ್ವದ ಕೆಕೆಆರ್ ತಂಡ ಐಪಿಎಲ್ ಟೂರ್ನಿಗಳಲ್ಲಿ 2012 ಹಾಗೂ 2014ರಲ್ಲಿ ಚಾಂಪಿಯನ್ ಆಗಿತ್ತು.

ಮುಂಬೈ(ಮಾ.04): ಕಳೆದ ಆವೃತ್ತಿಗಳಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಮುನ್ನಡೆಸಿದ್ದ ಗೌತಮ್ ಗಂಭೀರ್ 2018ರ ಹರಾಜಿನಲ್ಲಿ ಡೆಲ್ಲಿ ಡೇರ್'ಡೇವಿಲ್ಸ್ ತಂಡದ ಪಾಲಾಗಿರುವ ಕಾರಣ ಕೆಕೆಆರ್ ತಂಡವನ್ನು  7.4 ಕೋಟಿಗೆ ಹರಾಜಾಗಿರುವ ದಿನೇಶ್ ಕಾರ್ತಿಕ್ ತಂಡದ ನಾಯಕನಾಗಿ ಮುನ್ನಡೆಸಲಿದ್ದಾರೆ.

ಇದೇ ತಂಡದಲ್ಲಿರುವ ಕನ್ನಡಿಗ ರಾಬಿನ್ ಉತ್ತಪ್ಪ ಉಪನಾಯಕರನ್ನಾಗಿ ನೇಮಕ ಮಾಡಲಾಗಿದೆ. ದಿನೇಶ್ ಕಾರ್ತಿಕ್ ಕಳೆದೆರಡು ಆವೃತ್ತಿಗಳಿಂದ ಗುಜರಾತ್ ಲಯನ್ಸ್ ತಂಡದ ಪರ ಆಡಿದ್ದರು. ಕಾರ್ತಿಕ್ ದೇಶೀಯ ಕ್ರಿಕೆಟ್ ಟೂರ್ನಿಗಳಲ್ಲಿ ತಮಿಳುನಾಡು ರಣಜಿ ತಂಡದ ನಾಯಕರಾಗಿದ್ದರು. ಇವರ ಅವಧಿಯಲ್ಲಿ 2009-10 ತಂಡವು ವಿಜಯ್ ಹಜಾರೆ ಟ್ರೋಫಿ ಗೆದ್ದಿತ್ತು.

ಬಾಲಿವುಡ್ ನಟ ಶಾರೂಕ್ ಖಾನ್ ಮಾಲಿಕತ್ವದ ಕೆಕೆಆರ್ ತಂಡ ಐಪಿಎಲ್ ಟೂರ್ನಿಗಳಲ್ಲಿ 2012 ಹಾಗೂ 2014ರಲ್ಲಿ ಚಾಂಪಿಯನ್ ಆಗಿತ್ತು. ಯಶಸ್ವಿ ತಂಡದ ನಾಯಕನನ್ನಾಗಿ ಮಾಡಿರುವುದಕ್ಕೆ ನಾನು ಆಭಾರಿಯಾಗಿದ್ದು ನೂತನ ಆಟಗಾರರಿರುವ ತಂಡವನ್ನು ಮುನ್ನಡೆಸಲು ಇದು ನನಗೆ ಹೊಸ ಸವಾಲಾಗಿದೆ. ತಂಡವು ಅತ್ಯುತ್ತಮವಾಗಿ ಪ್ರದರ್ಶನ ತೋರಿಸಲು ನಾನು ಕೈಲಾದಷ್ಟು ಪ್ರಯತ್ನಿಸುತ್ತೇನೆ'ಎಂದು ತಿಳಿಸಿದ್ದಾರೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Duleep Trophy Final: ಸ್ಪೋಟಕ ಆರಂಭ ಕೊಟ್ಟ ವೈಭವ್ ಸೂರ್ಯವಂಶಿಗೆ ಭಾರೀ ನಿರಾಸೆ, ಈಶ್ವರನ್ ಅರ್ಧ ಶತಕ
2000ರ U19 ವಿಶ್ವಕಪ್ ಹೀರೋ: ಕ್ರಿಕೆಟ್ ಇತಿಹಾಸದ 'ದಿ ಬೆಸ್ಟ್' ಆಲ್‌ರೌಂಡರ್ ಆಗಬೇಕಿದ್ದವನ ದುರಂತ ಕಥೆ!