ಗೆಲುವಿನ ನಾಗಾಲೋಟ ಮುಂದುವರೆಸಿದ ಕೆಕೆಆರ್

Published : Apr 15, 2017, 02:21 PM ISTUpdated : Apr 11, 2018, 12:37 PM IST
ಗೆಲುವಿನ ನಾಗಾಲೋಟ ಮುಂದುವರೆಸಿದ ಕೆಕೆಆರ್

ಸಾರಾಂಶ

ಸ್ಫೋಟಕ ಬ್ಯಾಟಿಂಗ್ ನಡೆಸಿದ ರಾಬಿನ್ ಉತ್ತಪ್ಪ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

ಕೋಲ್ಕತಾ(ಏ.15): ಕನ್ನಡಿಗರಾದ ರಾಬಿನ್ ಉತ್ತಪ್ಪ ಹಾಗೂ ಮನೀಷ್ ಪಾಂಡೆಯ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಕೋಲ್ಕತಾ ನೈಟ್ ತಂಡ ಹಾಲಿ ಚಾಂಪಿಯನ್ ಸೈನ್'ರೈಸರ್ಸ್ ಹೈದರಾಬಾದ್ ಮಣಿಸುವ ಮೂಲಕ ಗೆಲುವಿನ ನಾಗಾಲೋಟವನ್ನು ಮುಂದುವರಿಸಿದೆ.

ಟಾಸ್ ಸೋತರು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ನೈಟ್'ರೈಡರ್ಸ್ ಪಡೆ ರಾಬಿನ್ ಉತ್ತಪ್ಪ ಅರ್ಧಶತಕ(68) ಹಾಗೂ ಮನಿಷ್ ಪಾಂಡೆ(46) ನೆರವಿನಿಂದ 172ರನ್ ಕಲೆಹಾಕಿತು.

ಸವಾಲಿನ ಗುರಿ ಬೆನ್ನತ್ತಿದ ಸನ್'ರೈಸರ್ಸ್ ಹೈದರಾಬಾದ್ ತಂಡ 20 ಓವರ್'ಗಳಲ್ಲಿ ಆರು ವಿಕೆಟ್ ನಷ್ಟಕ್ಕೆ ಕೇವಲ 155ರನ್ ಗಳಿಸಲಷ್ಟೇ ಶಕ್ತವಾಯಿತು. ಈ ಮೂಲಕ ನೈಟ್'ರೈಡರ್ಸ್ 17ರನ್'ಗಳ ಅಂತರದ ವಿಜಯ ಸಾಧಿಸಿತು. ಈ ಗೆಲುವಿನ ಮೂಲಕ ಕೋಲ್ಕತಾ ಮೈದಾನದಲ್ಲಿ ನೈಟ್'ರೈಡರ್ಸ್ ಪಡೆ ತಾನಾಡಿದ 5 ಪಂದ್ಯಗಳಲ್ಲೂ ಹೈದರಾಬಾದ್ ತಂಡವನ್ನು ಮಣಿಸಿ ದಾಖಲೆ ಬರೆಯಿತು.

ಸ್ಫೋಟಕ ಬ್ಯಾಟಿಂಗ್ ನಡೆಸಿದ ರಾಬಿನ್ ಉತ್ತಪ್ಪ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ಜಾಕ್‌ಪಾಟ್‌; 8 ಕೋಟಿಗಾಗಿ ಹನಿಮೂನ್ ತ್ಯಾಗಕ್ಕೆ ರೆಡಿಯಾದ ಈ ಸ್ಟಾರ್ ಕ್ರಿಕೆಟರ್!
ಟಿ20 ವಿಶ್ವಕಪ್ ಟೂರ್ನಿಗೆ ಬಲಿಷ್ಠ ತಂಡ ಆಯ್ಕೆ ಮಾಡಿದ ಆಕಾಶ್ ಚೋಪ್ರಾ; ಗಿಲ್‌ಗಿಲ್ಲ ಉಪನಾಯಕ ಪಟ್ಟ!