ಬುಲ್ಸ್’ಗೆ ಅಜರುದ್ದೀನ್ ರಾಯಭಾರಿಯಾಗಿ ಆಯ್ಕೆ

Published : Aug 03, 2018, 01:18 PM IST
ಬುಲ್ಸ್’ಗೆ ಅಜರುದ್ದೀನ್ ರಾಯಭಾರಿಯಾಗಿ ಆಯ್ಕೆ

ಸಾರಾಂಶ

ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿದ್ದ ಬಿಜಾಪುರ ಬುಲ್ಸ್, ಈ ಬಾರಿ ಚಾಂಪಿಯನ್ ಆಗುವ ವಿಶ್ವಾಸವಿದೆ. ‘ಯುವ ಪ್ರತಿಭೆಗಳಿಗೆ ವೇದಿಕೆ ಸೃಷ್ಟಿಸಿರುವ ಕೆಪಿಎಲ್ ಉತ್ತಮವಾಗಿ ಮೂಡಿಬರುತ್ತಿದೆ. ನನ್ನನ್ನು ರಾಯಭಾರಿಯಾಗಿ ಗುರುತಿಸಿದ್ದರಿಂದ ಖುಷಿಯಾಗಿದೆ’ ಎಂದು ಅಜರುದ್ದೀನ್ ಹೇಳಿದ್ದಾರೆ.

ಬೆಂಗಳೂರು[ಆ.03]: 7ನೇ ಆವೃತ್ತಿಯ ಕೆಪಿಎಲ್ (ಕರ್ನಾಟಕ ಪ್ರೀಮಿಯರ್ ಲೀಗ್)ನ ಬಿಜಾಪುರ ಬುಲ್ಸ್ ತಂಡದ ಪ್ರಚಾರ ರಾಯಭಾರಿಯಾಗಿ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ನೇಮಕಗೊಂಡಿದ್ದಾರೆ. 

ಆಗಸ್ಟ್ 15ರಿಂದ ಸೆಪ್ಟೆಂಬರ್ 6 ರವರೆಗೆ ಪಂದ್ಯಾವಳಿ ನಡೆಯಲಿದೆ. ಕಳೆದ ಆವೃತ್ತಿಯಲ್ಲಿ ರನ್ನರ್ ಅಪ್ ಆಗಿದ್ದ ಬಿಜಾಪುರ ಬುಲ್ಸ್, ಈ ಬಾರಿ ಚಾಂಪಿಯನ್ ಆಗುವ ವಿಶ್ವಾಸವಿದೆ. ‘ಯುವ ಪ್ರತಿಭೆಗಳಿಗೆ ವೇದಿಕೆ ಸೃಷ್ಟಿಸಿರುವ ಕೆಪಿಎಲ್ ಉತ್ತಮವಾಗಿ ಮೂಡಿಬರುತ್ತಿದೆ. ನನ್ನನ್ನು ರಾಯಭಾರಿಯಾಗಿ ಗುರುತಿಸಿದ್ದರಿಂದ ಖುಷಿಯಾಗಿದೆ’ ಎಂದು ಅಜರುದ್ದೀನ್ ಹೇಳಿದ್ದಾರೆ.

ಕರ್ನಾಟಕ ಪ್ರೀಮಿಯರ್ ಲೀಗ್ ಟೂರ್ನಿಯು ಆಗಸ್ಟ್ 15ರಂದು ಚಿನ್ನಸ್ವಾಮಿ ಮೈದಾನದಲ್ಲಿ ಆರಂಭವಾಗಲಿದ್ದು, ಬೆಂಗಳೂರು ಬ್ಲಾಸ್ಟರ್ಸ್ ಹಾಗೂ ಬೆಳಗಾವಿ ಪ್ಯಾಂಥರ್ಸ್ ತಂಡಗಳು ಮುಖಾಮುಖಿಯಾಗಲಿವೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆದ ಟಾಪ್ 6 ಆಟಗಾರರಿವರು!
ಐಪಿಎಲ್ ಮಿನಿ ಹರಾಜು: ಅನ್‌ಕ್ಯಾಪ್ಡ್‌ ಆಟಗಾರರಿಗೆ ಜಾಕ್‌ಪಾಟ್; 8 ಆಟಗಾರರನ್ನು ಖರೀದಿಸಿದ ಆರ್‌ಸಿಬಿ!