ಪ್ರತಿ ಸಿಕ್ಸರ್‌ - ಬೌಂಡರಿಗೆ ತಲಾ 100, 50 ಸಸಿ ಕೊಡುಗೆ!

Published : Aug 17, 2019, 08:59 AM IST
ಪ್ರತಿ ಸಿಕ್ಸರ್‌ -  ಬೌಂಡರಿಗೆ ತಲಾ 100, 50 ಸಸಿ ಕೊಡುಗೆ!

ಸಾರಾಂಶ

KPL ಟೂರ್ನಿಯಲ್ಲಿ ದಾಖಲಾಗುವ ಪ್ರತಿ ಸಿಕ್ಸರ್‌ಗೆ 100 ಸಸಿ ಹಾಗೂ ಪ್ರತಿ ಬೌಂಡರಿಗೆ 50 ಸಸಿಗಳನ್ನು ಕಾವೇರಿ ಕೂಗು ಅಭಿಯಾನಕ್ಕೆ ಕೊಡುಗೆ ನೀಡುವುದಾಗಿ ‘ಆ್ಯಡ್‌ಟುಪ್ರೊ’ ಸಂಸ್ಥೆ ಘೋಷಿಸಿದೆ.

ಬೆಂಗಳೂರು [ಆ.17]:  ಕಾವೇರಿ ನದಿ ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಈಶ ಫೌಂಡೇಶನ್‌ ಹಮ್ಮಿಕೊಂಡಿರುವ ‘ಕಾವೇರಿ ಕೂಗು’ ಕಾವೇರಿ ಜಲಾನಯನ ಪ್ರದೇಶದಲ್ಲಿ ಸಸಿ ನೆಡುವ ಅಭಿಯಾನಕ್ಕೆ ಈ ಬಾರಿಯ ಕರ್ನಾಟಕ ಪ್ರೀಯರ್‌ ಲೀಗ್‌(ಕೆಪಿಎಲ್‌) ಸಾಥ್‌ ನೀಡಿದೆ.

ಈ ಟೂರ್ನಿಯಲ್ಲಿ ದಾಖಲಾಗುವ ಪ್ರತಿ ಸಿಕ್ಸರ್‌ಗೆ 100 ಸಸಿ ಹಾಗೂ ಪ್ರತಿ ಬೌಂಡರಿಗೆ 50 ಸಸಿಗಳನ್ನು ಕಾವೇರಿ ಕೂಗು ಅಭಿಯಾನಕ್ಕೆ ಕೊಡುಗೆ ನೀಡುವುದಾಗಿ ‘ಆ್ಯಡ್‌ಟುಪ್ರೊ’ ಸಂಸ್ಥೆ ಘೋಷಿಸಿದೆ. ಈ ಸಸಿಗಳನ್ನು ರೈತರಿಗೆ ವಿತರಿಸಿ ಕಾವೇರಿ ಜಲಾನಯನ ಪ್ರದೇಶದಲ್ಲಿ ನೆಡಿಸಲಾಗುತ್ತದೆ.

ಶುಕ್ರವಾರ ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ 8ನೇ ಆವೃತ್ತಿಯ ಕೆಪಿಎಲ್‌ ಕ್ರಿಕೆಟ್‌ ಪಂದ್ಯಾವಳಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾರತ ತಂಡದ ಮಾಜಿ ವೇಗದ ಬೌಲರ್‌ ವೆಂಕಟೇಶ್‌ ಪ್ರಸಾದ್‌ ಕಾವೇರಿ ಕೂಗು ಅಭಿಯಾನ ಬೆಂಬಲಿಸಿ ಅದರ ಬಗ್ಗೆ ಮಾತನಾಡಿದರು. ಅಂತೆಯೆ ಪಂದ್ಯಾವಳಿಯಲ್ಲಿ ದಾಖಲಾಗುವ ಪ್ರತಿ ಸಿಕ್ಸ್‌ ಮತ್ತು ಬೌಂಡರಿಗೆ ಸಸಿಗಳನ್ನು ಕೊಡುಗೆ ನೀಡುವ ವಿಚಾರ ತಿಳಿದು ಸಂತಸ ವ್ಯಕ್ತಪಡಿಸಿದರು. ಈ ಬಗ್ಗೆ ತಾವು ಬಹಳ ಕಾತುರಾಗಿರುವುದಾಗಿ ಹೇಳಿದರು. ಇದೇ ವೇಳೆ ನಟಿ ರಾಗಿಣಿ ದ್ವಿವೇದಿ ಹಾಗೂ ರಾರ‍ಯಪರ್‌ ಚಂದನ್‌ ಶೆಟ್ಟಿಕೂಡ ಈ ಕಾವೇರಿ ಕೂಗು ಅಭಿಯಾನಕ್ಕೆ ಬೆಂಬಲ ಸೂಚಿಸಿದರು.

ಕಾವೇರಿ ಕಾಲಿಂಗ್‌ ಹೆಸರಿನ ಹ್ಯಾಷ್‌ಟ್ಯಾಗ್‌ನಲ್ಲಿ ಈ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಪ್ರಸ್ತುತ ಆವೃತ್ತಿಯ ಕೆಪಿಎಲ್‌ ಟೂರ್ನಿಯಲ್ಲಿ ಅಭಿಯಾನವನ್ನು ಸಾಮಾಜಿಕ ಕಳಕಳಿಯ ಸಹಭಾಗಿತ್ವದಡಿ ಕೈಗೊಳ್ಳಲಾಗಿದೆ. ಭಾರತ ಕ್ರಿಕೆಟ್‌ ತಂಡ ಸ್ಟಾರ್‌ ಬ್ಯಾಟ್ಸ್‌ಮನ್‌ ಕೆ.ಎಲ್‌.ರಾಹುಲ್‌ ಅವರು ಈ ಹಿಂದೆ ಇಶಾ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರು ಜತೆ ಕಾವೇರಿ ನದಿಯ ಸ್ಥಿತಿಗತಿ ಹಾಗೂ ನದಿಪಾತ್ರ ಪುನಶ್ಚೇತನಕ್ಕೆ ಕೈಗೊಳ್ಳಬೇಕಾದ ಅರಣ್ಯ ಕೃಷಿ ಸೇರಿದಂತೆ ಹಲವು ಕ್ರಮಗಳ ಬಗ್ಗೆ ಚರ್ಚಿಸಿದ್ದರು.

ಮಹಾತ್ವಕಾಂಕ್ಷಿ ಯೋಜನೆ :  ಈಶ ಫೌಂಡೇಶನ್‌ನ ಸಂಸ್ಥಾಪಕ ಸದ್ಗುರು ಅವರು ಕಾವೇರಿ ನದಿ ಸಂರಕ್ಷಿಸುವ ಉದ್ದೇಶದಿಂದ ಕಾವೇರಿ ನದಿ ಪಾತ್ರದಲ್ಲಿ 242 ಕೋಟಿ ಸಸಿ ನೆಡುವ ಮಹಾತ್ವಾಕಾಂಕ್ಷೆಯೊಂದಿಗೆ ದೇಶದಲ್ಲೇ ಮೊದಲ ಬಾರಿಗೆ ಇಂತಹ ಬೃಹತ್‌ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಅರಣ್ಯ ಕೃಷಿಯಿಂದ ರೈತರ ಆದಾಯ ಮುಂದಿನ 5-7 ವರ್ಷದಲ್ಲಿ ಮೂರಕ್ಕೂ ಹೆಚ್ಚುಪಟ್ಟು ಜಾಸ್ತಿಯಾಗುವ ನಿರೀಕ್ಷೆ ಹೊಂದಲಾಗಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL Playoffs: ಒಂದೇ ಸ್ಥಾನ, 4 ತಂಡಗಳ ಫೈಟ್! ಯಾರಿಗೆ ಸಿಗಲಿದೆ ಕೊನೆಯ ಚಾನ್ಸ್?
ಚೇಸ್ ಮಾಡಿ ಗೆಲ್ಲೋ ಚಾನ್ಸ್ ಇದ್ದರೂ 166 ರನ್ ದಾಟಿಸಲು ಪ್ರಯತ್ನಿಸಿ ಸೋಲು ಕಂಡಿತಾ ಆರ್‌ಸಿಬಿ?