ಕೆಕೆಆರ್’ಗೆ ಸವಾಲಿನ ಗುರಿ ನೀಡಿದ ಹೈದರಾಬಾದ್; ಮಾರಕ ದಾಳಿ ನಡೆಸಿದ ಕನ್ನಡಿಗ

Published : May 19, 2018, 10:22 PM IST
ಕೆಕೆಆರ್’ಗೆ ಸವಾಲಿನ ಗುರಿ ನೀಡಿದ ಹೈದರಾಬಾದ್; ಮಾರಕ ದಾಳಿ ನಡೆಸಿದ ಕನ್ನಡಿಗ

ಸಾರಾಂಶ

ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಹೈದರಾಬದ್ ಭರ್ಜರಿ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್’ಗೆ ಶ್ರೀವಾತ್ಸವ್ ಗೋಸ್ವಾಮಿ-ಧವನ್ ಜೋಡಿ 79 ರನ್’ಗಳ ಜತೆಯಾಟವಾಡಿತು. 

ಹೈದರಾಬಾದ್[ಮೇ.19]: ಯುವ ವೇಗಿ ಪ್ರಸಿದ್ಧ್ ಕೃಷ್ಣ ಮಾರಕ ದಾಳಿಯ ಹೊರತಾಗಿಯೂ ಶಿಖರ್ ಧವನ್ ಆಕರ್ಷಕ ಅರ್ಧಶತಕದ ನೆರವಿನಿಂದ 172 ರನ್’ಗಳ ಸವಾಲಿನ ಮೊತ್ತ ಕಲೆಹಾಕಿದೆ.
ಟಾಸ್ ಗೆದ್ದು ಬ್ಯಾಟಿಂಗ್ ನಡೆಸಿದ ಹೈದರಾಬದ್ ಭರ್ಜರಿ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್’ಗೆ ಶ್ರೀವಾತ್ಸವ್ ಗೋಸ್ವಾಮಿ-ಧವನ್ ಜೋಡಿ 79 ರನ್’ಗಳ ಜತೆಯಾಟವಾಡಿತು. ಆ ಬಳಿಕ ನಾಯಕ ವಿಲಿಯಮ್ಸನ್ ಜತೆ ಇನಿಂಗ್ಸ್ ಕಟ್ಟಿದ ಧವನ್ ತಂಡದ ಮೊತ್ತವನ್ನು ನೂರರ ಗಡಿ ದಾಟಿಸಿದರು. ಧವನ್[50] ರನ್ ಬಾರಿಸಿ ಪ್ರಸಿದ್ಧ್’ಗೆ ವಿಕೆಟ್ ಒಪ್ಪಿಸಿದರೆ, ವಿಲಿಯಮ್ಸನ್[36] ಹಾಗೂ ಮನೀಶ್ ಪಾಂಡೆ[25] ರನ್ ಬಾರಿಸುವ ಮೂಲಕ ಸವಾಲಿನ ಮೊತ್ತ ಕಲೆಹಾಕಿದೆ.
ಕೊನೆಯ ಓವರ್’ನಲ್ಲಿ ಮಾರಕ ದಾಳಿ ನಡೆಸಿದ ಪ್ರಸಿದ್ಧ್ ಕೃಷ್ಣ ಸನ್’ರೈಸರ್ಸ್ ರನ್ ವೇಗಕ್ಕೆ ಕಡಿವಾಣ ಹಾಕಿದರು. ಪಂದ್ಯದಲ್ಲಿ ಒಟ್ಟು 4 ವಿಕೆಟ್ ಕಬಳಿಸುವ ಮೂಲಕ ಕನ್ನಡಿಗ ಪ್ರಸಿದ್ಧ್ ಕೃಷ್ಣ ಗಮನ ಸೆಳೆಯುವಲ್ಲಿ ಯಶಸ್ವಿಯಾದರು.
ಸಂಕ್ಷಿಪ್ತ ಸ್ಕೋರ್:
KKR: 172/9
ಧವನ್: 50
ಪ್ರಸಿದ್ಧ್ : 30/4  
[* ವಿವರ ಅಪೂರ್ಣ]  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂತಾರಾಷ್ಟ್ರೀಯ ಟಿ20ಯಲ್ಲಿ ಆಲ್ರೌಂಡರ್ ಆಗಿ ಅಪರೂಪದಲ್ಲೇ ಅಪರೂಪದ ದಾಖಲೆ ಬರೆದ ಹಾರ್ದಿಕ್ ಪಾಂಡ್ಯ!
U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!