ಕ್ರುನಾಲ್ ಪಾಂಡ್ಯ-ದೀಪಕ್ ಚಹಾರ್‌ಗೆ ಟೀಂ ಇಂಡಿಯಾದಿಂದ ಚೊಚ್ಚಲ ಕರೆ

Published : Jul 01, 2018, 06:11 PM IST
ಕ್ರುನಾಲ್ ಪಾಂಡ್ಯ-ದೀಪಕ್ ಚಹಾರ್‌ಗೆ ಟೀಂ ಇಂಡಿಯಾದಿಂದ ಚೊಚ್ಚಲ ಕರೆ

ಸಾರಾಂಶ

ಇಂಗ್ಲೆಂಡ್ ವಿರುದ್ಧದ ಸರಣಿಗೂ ಮುನ್ನ ಟೀಂಇಂಡಿಯಾದಲ್ಲಿ ಗಾಯದ ಸಮಸ್ಯೆ ಉಲ್ಬಣಿಸಿದೆ. ಹೀಗಾಗಿ ಜಸ್‌ಪ್ರೀತ್ ಬುಮ್ರಾ ಹಾಗೂ ವಾಶಿಂಗ್ಟನ್ ಸುಂದರ್ ಬದಲು ಟೀಮ್ ಇಂಡಿಯಾ ಯುವ ಕ್ರಿಕೆಟಿಗರಿಗೆ ಮಣೆ ಹಾಕಿದೆ. ಹಾಗಾದರೆ ಟೀಂ ಇಂಡಿಯಾದ ನೂತನ ತಂಡ ಹೇಗಿದೆ ?

ಮುಂಬೈ(ಜು.01): ಇಂಜುರಿ ಕಾರಣದಿಂದ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ಹೊರಬಿದ್ದ ವೇಗಿ ಜಸ್‌ಪ್ರೀತ್ ಬುಮ್ರಾ ಹಾಗೂ ವಾಶಿಂಗ್ಟನ್ ಸುಂದರ್ ಬದಲಿಗೆ ಇಬ್ಬರು ಯುವ ಕ್ರಿಕೆಟಿಗರು ಸೆಲೆಕ್ಷನ್ ಕಮಿಟಿ ಆಯ್ಕೆ ಮಾಡಿದೆ.

ಬುಮ್ರಾ ಹಾಗೂ ಸುಂದರ್ ಬದಲು,  ಮುಂಬೈ ಇಂಡಿಯನ್ಸ್ ತಂಡದ ಪ್ರತಿಭಾನ್ವಿತ  ಆಲ್‌ರೌಂಡರ್ ಕ್ರುನಾಲ್ ಪಾಂಡ್ಯ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಯುವ ಕ್ರಿಕೆಟಿಗ ದೀಪಕ್ ಚಹಾರ್ ಚೊಚ್ಚಲ ಬಾರಿಗೆ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ.  ವಾಶಿಂಗ್ಟನ್ ಸುಂದರ್ ಏಕದಿನ ಪಂದ್ಯಕ್ಕೂ ಅಲಭ್ಯರಾಗಿದ್ದಾರೆ. ಹೀಗಾಗಿ ಏಕದಿನ ಪಂದ್ಯದಲ್ಲಿ ಸುಂದರ್ ಬದಲು ಅಕ್ಸರ್ ಪಟೇಲ್ ತಂಡ ಸೇರಿಕೊಳ್ಳಲಿದ್ದಾರೆ. 

ಕೈಬೆರಳಿನ ಗಾಯದಿಂದ ಜಸ್‌ಪ್ರೀತ್ ಬುಮ್ರಾ ಇಂಗ್ಲೆಂಡ್ ವಿರುದ್ಧದ ಟಿ20 ಟೂರ್ನಿಯಿಂದ ಹೊರಬಿದ್ದಿದ್ದಾರೆ. ಆದರೆ ಏಕದಿನ ಟೂರ್ನಿಗೆ ವಾಪಾಸ್ಸಾಗೋ ಸಾಧ್ಯತೆ ಇದೆ. ಜುಲೈ 3 ರಿಂದ ಇಂಗ್ಲೆಂಡ್ ವಿರುದ್ಧದ 3 ಟಿ20 ಪಂದ್ಯದ ಸರಣಿ ಆರಂಭಗೊಳ್ಳಲಿದೆ. 

ಭಾರತ ಟಿ20 ತಂಡ: ವಿರಾಟ್ ಕೊಹ್ಲಿ(ನಾಯಕ), ಶಿಖರ್ ಧವನ್,ರೋಹಿತ್ ಶರ್ಮಾ,ಕೆಎಲ್ ರಾಹುಲ್, ಸುರೇಶ್ ರೈನಾ, ಮನೀಶ್ ಪಾಂಡೆ, ಎಂ ಎಸ್ ಧೋನಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ಕುಲದೀಪ್ ಯಾದವ್, ಯಜುವೇಂದ್ರ ಚೆಹಾಲ್, ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್, ಉಮೇಶ್ ಯಾದವ್, ದೀಪಕ್ ಚಹಾರ್
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

T20 World Cup 2026: ಟಿ20 ವಿಶ್ವಕಪ್ ಫೈನಲ್ ಮಳೆಯಿಂದ ರದ್ದಾದ್ರೆ, ಟ್ರೋಫಿ ಯಾರಿಗೆ? ಇಲ್ಲಿದೆ ICC ರೂಲ್ಸ್
T20 World Cup Final: ಒಂದೇ ಮ್ಯಾಚ್, 3 ವಿಶ್ವ ದಾಖಲೆ! ಭಾರತ ಗೆದ್ದರೆ ಕ್ರಿಕೆಟ್ ಲೋಕದಲ್ಲಿ ಇತಿಹಾಸ