
ಬೆಂಗಳೂರು(ಮಾ.28): ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಹಾಗೂ ತನ್ನ ಪ್ರಾಯೋಜಕರಾದ ಭಾರತಿ ಸಿಮೆಂಟ್ಸ್ ಸಹಯೋಗದೊಂದಿಗೆ ತವರಿನಲ್ಲಿ ಆಡುವ ಪ್ರತಿ ಪಂದ್ಯಕ್ಕೆ ತಲಾ 60 ಯೋಧರನ್ನು ಆಹ್ವಾನಿಸಲು ನಿರ್ಧರಿಸಿದೆ.
IPL 2019:ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಟೈಂ ಟೇಬಲ್!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಎಲ್ಲಾ 7 ಪಂದ್ಯಗಳಿಗೂ ಸೈನಿಕರಿಗೆ ಆಹ್ವಾನ ನೀಡಲಾಗುವುದು ಎಂದು ಕೆಎಸ್ಸಿಎ ಪ್ರಕಟಣೆ ತಿಳಿಸಿದೆ. ಮಾರ್ಚ್ 28ರಿಂದ ಮೇ 04ರವರೆಗೆ ಲೀಗ್ ಹಂತದಲ್ಲಿ ಒಟ್ಟು 7 ಪಂದ್ಯಗಳು ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿದೆ.
ಐಪಿಎಲ್: RCB ಬೆಂಗಳೂರು ಪಂದ್ಯಕ್ಕೆ ಮೆಟ್ರೋದಿಂದ ಶುಭಸುದ್ದಿ..!
ರಾಯಲ್ ಚಾಲೆಂಜರ್ಸ್ ಬೆಂಗಳೂರು 20, ಕೆಎಸ್’ಸಿಎ 20 ಹಾಗೂ ಭಾರತಿ ಸಿಮೆಂಟ್ ತಲಾ 20 ಟಿಕೆಟ್’ಗಳನ್ನು ಯೋಧರಿಗೆ ನೀಡಲಿದೆ. ಈ ಮೊದಲು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸೂಚಕವಾಗಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದು ಮಾಡಿ ಬಿಸಿಸಿಐ 20 ಕೋಟಿ ರುಪಾಯಿಯನ್ನು ಸೇನಾ ಕಲ್ಯಾಣ ನಿಧಿಗೆ ಅರ್ಪಿಸಿತ್ತು. ಆ ಬಳಿಕ ಚೆನ್ನೈ ಸೂಪರ್’ಕಿಂಗ್ಸ್ ತಂಡವು ಉದ್ಘಾಟನಾ ಪಂದ್ಯದ ಸಂಭಾವನೆಯನ್ನು ಯೋಧರ ನಿಧಿಗೆ ನೀಡಿದ್ದರು.
ಮಾರ್ಚ್ 28ರಿಂದ ತವರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದ್ದು, ಜಯದ ಖಾತೆ ತೆರೆಯುವ ಉತ್ಸಾದಲ್ಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.