
ಮುಂಬೈ(ಅ.21): ಭಾರತದ ಯುವ ಸ್ಪಿನ್ನರ್'ಗಳನ್ನು ಕೊಂಡಾಡಿರುವ ತಂಡದ ಉಪನಾಯಕ ರೋಹಿತ್ ಶರ್ಮಾ, ‘ಕುಲ್ದೀಪ್ ಯಾದವ್ ಹಾಗೂ ಯುಜುವೇಂದ್ರ ಚಾಹಲ್'ರನ್ನು ಎದುರಿಸುವುದು ನ್ಯೂಜಿಲೆಂಡ್'ಗೆ ದೊಡ್ಡ ಸವಾಲಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕಿವೀಸ್ ಬ್ಯಾಟ್ಸ್ಮನ್'ಗಳನ್ನು ಕಟ್ಟಿಹಾಕಲು ಇಬ್ಬರೂ ಕೆಲ ಬದಲಾವಣೆಗಳನ್ನು ಮಾಡಿಕೊಂಡು ಕಣಕ್ಕಿಳಿಯಲಿದ್ದಾರೆ. ಪ್ರಯೋಗಗಳನ್ನು ನಡೆಸಲು ಕುಲ್ದೀಪ್ ಹಾಗೂ ಚಾಹಲ್ ಹೆದರುವುದಿಲ್ಲ’ ಎಂದು ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ 22 ವರ್ಷದ ಕುಲ್ದೀಪ್ 9 ವಿಕೆಟ್ ಕಬಳಿಸಿದ್ದರೆ, ಹರ್ಯಾಣ ಮೂಲದ ಯುಜುವೇಂದ್ರ ಚಾಹಲ್ 7 ವಿಕೆಟ್ ಪಡೆದು ಮಿಂಚಿದ್ದಾರೆ.
ಇದೇ ವೇಳೆ ನ್ಯೂಜಿಲೆಂಡ್ ವೇಗಿ ಟ್ರೆಂಟ್ ಬೌಲ್ಟ್ ಅವರನ್ನು ಎದುರಿಸಲು ಭಾರತೀಯ ಬ್ಯಾಟ್ಸ್ಮನ್'ಗಳು ಸಿದ್ದರಿದ್ದಾರೆ ಎಂದು ರೋಹಿತ್ ಹೇಳಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯು ನಾಳೆಯಿಂದ(ಅ.21) ಆರಂಭವಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.