ಮಿನರಲ್ ವಾಟರ್'ನಲ್ಲಿ ಚೆಂಡನ್ನದ್ದಿ ಕುಲ್ದೀಪ್ ಪ್ರಾಕ್ಟೀಸ್..!

Published : Nov 01, 2017, 04:08 PM ISTUpdated : Apr 11, 2018, 12:39 PM IST
ಮಿನರಲ್ ವಾಟರ್'ನಲ್ಲಿ ಚೆಂಡನ್ನದ್ದಿ ಕುಲ್ದೀಪ್ ಪ್ರಾಕ್ಟೀಸ್..!

ಸಾರಾಂಶ

ಇಬ್ಬನಿ ಬೀಳುವುದರಿಂದ ಚೆಂಡು ಒದ್ದೆಯಾಗಲಿದ್ದು, ಅದನ್ನು ಭದ್ರವಾಗಿ ಹಿಡಿದುಕೊಳ್ಳಲು ಕಷ್ಟವಾಗಬಹುದು ಎನ್ನುವ ಕಾರಣ, ಕುಲ್ದೀಪ್ ಒದ್ದೆ ಚೆಂಡಿನೊಂದಿಗೆ ಅಭ್ಯಾಸ ನಡೆಸಿದರು.

ನವದೆಹಲಿ(ನ.01): ನ್ಯೂಜಿಲೆಂಡ್ ವಿರುದ್ಧ ಮೊದಲ ಟಿ20 ವೇಳೆ ಇಬ್ಬನಿ ಬೀಳಬಹುದು ಎನ್ನುವ ಮುಂದಾಲೋಚನೆಯಿಂದ ಭಾರತದ ಕುಲ್ದೀಪ್ ಯಾದವ್ ಅಭ್ಯಾಸದ ವೇಳೆ ಹೊಸ ತಂತ್ರವನ್ನು ಅಳವಡಿಸಿಕೊಂಡಿದ್ದು ಭಾರೀ ಸುದ್ದಿಯಾಗಿದೆ.

ಇಬ್ಬನಿ ಬೀಳುವುದರಿಂದ ಚೆಂಡು ಒದ್ದೆಯಾಗಲಿದ್ದು, ಅದನ್ನು ಭದ್ರವಾಗಿ ಹಿಡಿದುಕೊಳ್ಳಲು ಕಷ್ಟವಾಗಬಹುದು ಎನ್ನುವ ಕಾರಣ, ಕುಲ್ದೀಪ್ ಒದ್ದೆ ಚೆಂಡಿನೊಂದಿಗೆ ಅಭ್ಯಾಸ ನಡೆಸಿದರು. ಚೆಂಡನ್ನು ಮಿನರಲ್ ವಾಟರ್‌'ನಲ್ಲಿ ಅದ್ದಿ ಬೌಲಿಂಗ್ ಮಾಡುತ್ತಿದ್ದದ್ದು ನೋಡುಗರಿಗೆ ಅಚ್ಚರಿಯನ್ನುಂಟು ಮಾಡಿತು.

ಇಬ್ಬನಿ ಪಂದ್ಯದ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ ಎಂದು ಇಲ್ಲಿನ ಪಿಚ್ ಕ್ಯುರೇಟರ್‌ಗಳು ಭವಿಷ್ಯ ನುಡಿದಿದ್ದಾರೆ. ಹೀಗಾಗಿ ಟಾಸ್ ಗೆಲ್ಲುವ ತಂಡ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದರೆ ಯಾವುದೇ ಆಶ್ಚರ್ಯವಿಲ್ಲ. ಕಾರಣ, ಇಬ್ಬನಿಯಿಂದಾಗಿ ಚೆಂಡು, ಬ್ಯಾಟ್‌'ಗೆ ಸುಲಭವಾಗಿ ಸಿಗಲಿದೆ. ಹೀಗಾಗಿ, ಬ್ಯಾಟ್ಸ್‌'ಮನ್‌'ಗಳಿಗೆ ಹೆಚ್ಚಿನ ಸಹಕಾರ ದೊರೆಯಲಿದ್ದು, ಎಷ್ಟೇ ದೊಡ್ಡ ಮೊತ್ತವಿದ್ದರೂ ಅದನ್ನು ಬೆನ್ನಟ್ಟುವ ಸಾಧ್ಯತೆ ಹೆಚ್ಚಿರಲಿದೆ ಎಂದು ಕ್ಯುರೇಟರ್ ಅಭಿಪ್ರಾಯಪಟ್ಟಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಟಿ20 ವಿಶ್ವಕಪ್ ತಂಡದಿಂದ ಗಿಲ್‌ಗೆ ಔಟ್: ಅಷ್ಟಕ್ಕೂ ಕೊನೆಯ ಕ್ಷಣದಲ್ಲಿ ಆಯ್ಕೆ ಸಮಿತಿ ಈ ತೀರ್ಮಾನ ಮಾಡಿದ್ದೇಕೆ?
ಎರಡು ಮ್ಯಾಚ್ ಬಾಕಿ ಇರುವಂತೆಯೇ ಆ್ಯಶಸ್ ಕಿರೀಟ ಗೆದ್ದ ಆಸ್ಟ್ರೇಲಿಯಾ! ಇಂಗ್ಲೆಂಡ್‌ಗೆ ರೋಚಕ ಸೋಲು