
ಕೋಲ್ಕತಾ: ‘ಎಂ.ಎಸ್.ಧೋನಿ ನೀಡುವ ಸಲಹೆಗಳು ಸಹ ಹಲವು ಬಾರಿ ಕೈಕೊಟ್ಟಿವೆ’ ಎಂದು ಕುಲ್ದೀಪ್ ಯಾದವ ಹೇಳಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು. ಭಾರತ ತಂಡದ ಎಡಗೈ ಸ್ಪಿನ್ನರ್ ಹೇಳಿಕೆ ಭಾರಿ ಚರ್ಚೆಗೆ ಕಾರಣವಾಗಿತ್ತು. ಆದರೆ ಕುಲ್ದೀಪ್ ತಾವು ಆ ರೀತಿ ಹೇಳೇ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಧೋನಿ ವಿರುದ್ಧ ತಿರುಗಿ ಬಿದ್ರಾ ಕುಲ್ದೀಪ್ ಯಾದವ್?
‘ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ನಮ್ಮವರು ಎತ್ತಿದ ಕೈ. ನಾನು ಯಾರಿಗೂ ಸಂದರ್ಶನವನ್ನೇ ನೀಡಿಲ್ಲ. ಧೋನಿ ಬಗ್ಗೆ ನಾನು ಮಾತನಾಡಿಲ್ಲ’ ಎಂದು ಕುಲ್ದೀಪ್ ಹೇಳಿದ್ದಾರೆ. ಇದೇ ವೇಳೆ ತಮ್ಮ ಯಶಸ್ಸಿಗೆ ನಾಯಕ ವಿರಾಟ್ ಕೊಹ್ಲಿ ಕಾರಣ ಎಂದಿದ್ದಾರೆ. ‘ಆಕ್ರಮಣಕಾರಿ ಬೌಲಿಂಗ್ ದಾಳಿ ನಡೆಸಲು ಕೊಹ್ಲಿ ಪೂರ್ಣ ಸ್ವತಂತ್ರ ನೀಡಿದ್ದಾರೆ. ಆದ್ದರಿಂದಲೇ ನಾನು ಯಶಸ್ಸು ಕಾಣಲು ಸಾಧ್ಯವಾಗಿದೆ’ ಎಂದು ಕುಲ್ದೀಪ್ ಹೇಳಿದ್ದಾರೆ.
ವಿಶ್ವಕಪ್ ಟೂರ್ನಿಗೆ ಭಾರತ ತಂಡ ಸಜ್ಜಾಗಿದ್ದು, ಮಣಿಕಟ್ಟು ಸ್ಪಿನ್ನರ್'ಗಳಾದ ಕುಲ್ದೀಪ್ ಯಾದವ್ ಹಾಗೂ ಯಜುವೇಂದ್ರ ಚಹಲ್ ಮೇಲೆ ಸಾಕಷ್ಟು ನಿರೀಕ್ಷೆಗಳಿವೆ. 12ನೇ ಆವೃತ್ತಿಯ ಐಪಿಎಲ್'ನಲ್ಲಿ ಕುಲ್ದೀಪ್ ನೀರಸ ಪ್ರದರ್ಶನ ತೋರಿದ್ದರು. ಆಡಿದ 9 ಪಂದ್ಯಗಳಲ್ಲಿ ಕೇವಲ 04 ವಿಕೆಟ್ ಮಾತ್ರ ಕಬಳಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.