ನಿವೃತ್ತಿಯ ಸುಳಿವು ನೀಡಿದ ಮಾಲಿಂಗಾ

Published : Sep 01, 2017, 03:51 PM ISTUpdated : Apr 11, 2018, 01:04 PM IST
ನಿವೃತ್ತಿಯ ಸುಳಿವು ನೀಡಿದ ಮಾಲಿಂಗಾ

ಸಾರಾಂಶ

ನಾನು ಎಷ್ಟು ಅನುಭವಿ ಎನ್ನುವುದು ಮಾತ್ರ ಮುಖ್ಯವಲ್ಲ. ತಂಡ ಬಯಸಿದ್ದನ್ನು ನನ್ನಿಂದ ನೀಡಲು ಸಾಧ್ಯವಿಲ್ಲ ಎಂದಾದರೆ, ನಾನು ತಂಡದಲ್ಲಿದ್ದು ಯಾವುದೇ ಪ್ರಯೋಜನವಿಲ್ಲ.

ಕೊಲಂಬೊ(ಸೆ.01): ಶ್ರೀಲಂಕಾ ತಂಡದ ಅನುಭವಿ ವೇಗದ ಬೌಲರ್ ಲಸಿತ್ ಮಾಲಿಂಗಾ ಭಾರತ ವಿರುದ್ಧದ ಸರಣಿಯ ಬಳಿಕ ಕ್ರಿಕೆಟ್ ಭವಿಷ್ಯದ ಬಗ್ಗೆ ತೀರ್ಮಾನ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

"ನಾನು ಕಾಲಿನ ಗಾಯದ ಸಮಸ್ಯೆಯಿಂದಾಗಿ ಸುಮಾರು 19 ತಿಂಗಳ ಬಳಿಕ ರಾಷ್ಟ್ರೀಯ ತಂಡಕ್ಕೆ ಮರಳಿದ್ದೇನೆ. ಜಿಂಬಾಬ್ವೆ ಹಾಗೂ ಭಾರತದ ವಿರುದ್ಧದ ಸರಣಿಯಲ್ಲಿ ನನ್ನಿಂದ ಅಷ್ಟೇನು ಉತ್ತಮ ಪ್ರದರ್ಶನ ಮೂಡಿಬಂದಿಲ್ಲ. ಈ ಸರಣಿಯ ಬಳಿಕ ನನ್ನ ದೇಹ ಕ್ರಿಕೆಟ್ ಆಡಲು ಎಷ್ಟು ಸ್ಪಂದಿಸುತ್ತದೆ ಎಂದು ಗಮನದಲ್ಲಿಟ್ಟು ಕ್ರಿಕೆಟ್ ಭವಿಷ್ಯದ ಬಗ್ಗೆ ಒಂದು ನಿರ್ಧಾರಕ್ಕೆ ಬರುತ್ತೇನೆ" ಎಂದು ಮಾಲಿಂಗಾ ತಿಳಿಸಿದ್ದಾರೆ.

"ನಾನು ಎಷ್ಟು ಅನುಭವಿ ಎನ್ನುವುದು ಮಾತ್ರ ಮುಖ್ಯವಲ್ಲ. ತಂಡ ಬಯಸಿದ್ದನ್ನು ನನ್ನಿಂದ ನೀಡಲು ಸಾಧ್ಯವಿಲ್ಲ ಎಂದಾದರೆ, ನಾನು ತಂಡದಲ್ಲಿದ್ದು ಯಾವುದೇ ಪ್ರಯೋಜನವಿಲ್ಲ. ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ನಾನು ಫಾರ್ಮ್'ಗೆ ಮರಳದಿದ್ದರೆ, ಸಂತೋಷದಿಂದಲೇ ನಿವೃತ್ತಿ ಹೊಂದುತ್ತೇನೆ" ಎಂದು ಯಾರ್ಕರ್ ಸ್ಪೆಷಲಿಸ್ಟ್ ಲಸಿತ್ ಮಾಲಿಂಗಾ ತಿಳಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಈ ಬಾರಿಯ ಐಪಿಎಲ್ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆದ ಟಾಪ್ 6 ಆಟಗಾರರಿವರು!
ಐಪಿಎಲ್ ಮಿನಿ ಹರಾಜು: ಅನ್‌ಕ್ಯಾಪ್ಡ್‌ ಆಟಗಾರರಿಗೆ ಜಾಕ್‌ಪಾಟ್; 8 ಆಟಗಾರರನ್ನು ಖರೀದಿಸಿದ ಆರ್‌ಸಿಬಿ!