ಭರ್ಜರಿಯಾಗಿ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಗಂಭೀರ್

Published : May 24, 2019, 04:31 PM IST
ಭರ್ಜರಿಯಾಗಿ ರಾಜಕೀಯ ಇನ್ನಿಂಗ್ಸ್ ಆರಂಭಿಸಿದ ಗಂಭೀರ್

ಸಾರಾಂಶ

ಪೂರ್ವ ದೆಹಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೌತಮ್ ಗಂಭೀರ್ ಕಾಂಗ್ರೆಸ್’ನ ಅರ್ವಿಂದರ್ ಸಿಂಗ್ ವಿರುದ್ಧ 3,91,222 ಮತಗಳ ಅಂತರದ ಭಾರೀ ಅಂತರದ ಗೆಲುವು ದಾಖಲಿಸಿದ್ದಾರೆ. ಈ ಗೆಲುವಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರು ಶುಭ ಕೋರಿದ್ದಾರೆ.

ನವದೆಹಲಿ[ಮೇ.24]: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ತಮ್ಮ ರಾಜಕೀಯ ಇನ್ನಿಂಗ್ಸ್ ಅನ್ನು ಭರ್ಜರಿಯಾಗಿಯೇ ಆರಂಭಿಸಿದ್ದಾರೆ. ಪೂರ್ವ ದೆಹಲಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗೌತಮ್ ಗಂಭೀರ್ ಕಾಂಗ್ರೆಸ್’ನ ಅರ್ವಿಂದರ್ ಸಿಂಗ್ ವಿರುದ್ಧ 3,91,222 ಮತಗಳ ಅಂತರದ ಭಾರೀ ಅಂತರದ ಗೆಲುವು ದಾಖಲಿಸಿದ್ದಾರೆ. ಈ ಗೆಲುವಿಗೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರು ಶುಭ ಕೋರಿದ್ದಾರೆ.

ಗಂಭೀರ್ ಸಿಕ್ಸರ್, ವಿಜೇಂದರ್ ಪಂಚರ್ - ಚುನಾವಣೆಯಲ್ಲಿ ಕ್ರೀಡಾಪಟುಗಳಿಗೆ ಸಿಹಿ-ಕಹಿ

ಗೆಲುವಿನ ಬಳಿಕ ಟ್ವೀಟ್ ಮಾಡಿದ್ದ ಗಂಭೀರ್, ಇದು ಆಕರ್ಷಕ ಕವರ್ ಡ್ರೈವ್ ಆಗಲಿ, ಅದ್ಭುತ ಬ್ಯಾಟಿಂಗ್ ಆಗಲಿ ಅಲ್ಲ. ಇದು ಬಿಜೆಪಿಯ ’ಗಂಭೀರ’ ತತ್ವಸಿದ್ದಾಂತದ ಗೆಲುವು. ಈ ಭಾರೀ ಗೆಲುವಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಧನ್ಯವಾದಗಳು. ಜನರ ನಿರೀಕ್ಷೆಗಳನ್ನು ನಾವು ಹುಸಿಮಾಡುವುದಿಲ್ಲ ಎಂದು ಗಂಭೀರ್ ಟ್ವೀಟ್ ಮಾಡಿದ್ದರು. 

ಪೂರ್ವ ದೆಹಲಿಯಲ್ಲಿ ಗೌತಮ್ ಗಂಭೀರ್[ಬಿಜೆಪಿ], ಕಾಂಗ್ರೆಸ್’ನ ಅರ್ವಿಂದರ್ ಸಿಂಗ್ ಹಾಗೂ ಆಮ್ ಆದ್ಮಿ ಪಕ್ಷದ ಆತಿಶಿ ಮರ್ಲೇನಾ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಗಂಭೀರ್ 6,96,156 ಮತಗಳನ್ನು ಪಡೆದರೆ, ಅರ್ವಿಂದರ್ ಸಿಂಗ್ 3,04,934 ಮತಗಳನ್ನು ಪಡೆದಿದ್ದರು. ಇನ್ನು ಆತಿಶಿ ಕೇವಲ 2,19,328 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿ ಉಳಿದರು.

ಕೆಲ ತಿಂಗಳುಗಳ ಹಿಂದಷ್ಟೇ ಬಿಜೆಪಿ ಸೇರ್ಪಡೆಗೊಂಡಿದ್ದ ಗಂಭೀರ್, ಚೊಚ್ಚಲ ಲೋಕಸಭಾ ಚುನಾವಣೆಯಲ್ಲೇ ಭರ್ಜರಿಯಾಗಿ ಗೆದ್ದು ಪಾರ್ಲಿಮೆಂಟ್ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ. ಗಂಭೀರ್ ಗೆಲುವಿಗೆ ಟೀಂ ಇಂಡಿಯಾ ಕ್ರಿಕೆಟಿಗರು ಮನದುಂಬಿ ಹಾರೈಸಿದ್ದಾರೆ.  ಹರ್ಭಜನ್ ಸಿಂಗ್, ಆರ್.ಪಿ ಸಿಂಗ್, ಶಿಖರ್ ಧವನ್, ಸುರೇಶ್ ರೈನಾ ಸೇರಿದಂತೆ ಹಲವು ಸಹಪಾಠಿ ಕ್ರಿಕೆಟಿಗರು ಗಂಭೀರ್’ಗೆ ಶುಭ ಹಾರೈಸಿದ್ದಾರೆ.   

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೆಹೆಂದಿಯಾಗಿತ್ತು, ಆದರೆ ಮದುವೆಯಾಗಲ್ಲ: ಕೊನೆಗೂ Palash Muchhal ಜೊತೆಗಿನ ಸಂಬಂಧಕ್ಕೆ ತೆರೆ ಎಳೆದ Smriti Mandhana
ಚಿನ್ನಸ್ವಾಮಿಗೆ ಅಂತಾರಾಷ್ಟ್ರೀಯ ಮತ್ತು IPL ಪಂದ್ಯಗಳು ವಾಪಸ್; ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ