ಧೋನಿ ಪರ ಬ್ಯಾಟಿಂಗ್ ಮಾಡಿದ ಶಾಸ್ತ್ರಿ

Published : Nov 15, 2017, 04:35 PM ISTUpdated : Apr 11, 2018, 12:48 PM IST
ಧೋನಿ ಪರ ಬ್ಯಾಟಿಂಗ್ ಮಾಡಿದ ಶಾಸ್ತ್ರಿ

ಸಾರಾಂಶ

ಧೋನಿಯಲ್ಲಿ ಇನ್ನಷ್ಟು ಬಾಕಿಯಿದೆ. ವಿಕೆಟ್ ಕೀಪರ್ ಆಗಿ ಧೋನಿಗಿಂತ ಆಟಗಾರ ಮತ್ತೊಬ್ಬರಿಲ್ಲ. ಕಠಿಣ ಸಂದರ್ಭದಲ್ಲಿ ಟೀಂ ಇಂಡಿಯಾ ಧೋನಿ ಪರ ನಿಲ್ಲಬೇಕು ಎಂದು ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಕೋಲ್ಕತಾ(ನ.15): ಭಾರತ ಕ್ರಿಕೆಟ್ ತಂಡದ ಪ್ರಧಾನ ಕೋಚ್ ರವಿಶಾಸ್ತ್ರಿ ಮತ್ತೊಮ್ಮೆ ಮಾಜಿ ನಾಯಕ ಎಂ.ಎಸ್. ಧೋನಿಯನ್ನು ಬೆಂಬಲಕ್ಕೆ ನಿಂತಿದ್ದಾರೆ.

ಭಾರತಕ್ಕೆ ಎರಡು ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕ ಧೋನಿಯನ್ನು ಟೀಕಿಸುವವರು, ಮೊದಲು ತಮ್ಮ ವೃತ್ತಿ ಬದುಕನ್ನು ಒಮ್ಮೆ ಹಿಂದಿರುಗಿ ನೋಡಬೇಕು ಎಂದು ಶಾಸ್ತ್ರಿ ಚಾಟಿ ಬೀಸಿದ್ದಾರೆ. ಧೋನಿಯಲ್ಲಿ ಇನ್ನಷ್ಟು ಬಾಕಿಯಿದೆ. ವಿಕೆಟ್ ಕೀಪರ್ ಆಗಿ ಧೋನಿಗಿಂತ ಆಟಗಾರ ಮತ್ತೊಬ್ಬರಿಲ್ಲ. ಕಠಿಣ ಸಂದರ್ಭದಲ್ಲಿ ಟೀಂ ಇಂಡಿಯಾ ಧೋನಿ ಪರ ನಿಲ್ಲಬೇಕು ಎಂದು ರವಿಶಾಸ್ತ್ರಿ ಅಭಿಪ್ರಾಯಪಟ್ಟಿದ್ದಾರೆ.

ಇತ್ತೀಚೆಗಷ್ಟೇ ವಿವಿಎಸ್ ಲಕ್ಷ್ಮಣ್, ಅಜಿತ್ ಅಗರ್ಕರ್ ಸೇರಿದಂತೆ ಇನ್ನೂ ಕೆಲ ಮಾಜಿ ಆಟಗಾರರು ಭಾರತ ಟಿ20 ತಂಡದಲ್ಲಿ ಧೋನಿ ಸ್ಥಾನವನ್ನು ಪ್ರಶ್ನಿಸಿದ್ದರು.

ಈ ಮೊದಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡಾ ಧೋನಿಗೆ ಬೆಂಬಲ ಸೂಚಿಸಿದ್ದರು. ಅಲ್ಲದೇ ಧೋನಿಯನ್ನು ಟೀಕಿಸುವುದು ಒಂದು ರೀತಿಯ ಫ್ಯಾಶನ್ ಆಗಿದೆ ಎಂದು ವ್ಯಂಗ್ಯವಾಡಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ICC Men’s T20 World Cup: ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ಅಚ್ಚರಿಯ ಆಯ್ಕೆ, ಗಿಲ್‌ಗಿಲ್ಲ ಸ್ಥಾನ
ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ