ಮಹರಾಜ್ ಘರ್ಜನೆಗೆ ಸೋಲೊಪ್ಪಿಕೊಂಡ ಕಿವೀಸ್

Published : Mar 18, 2017, 09:54 AM ISTUpdated : Apr 11, 2018, 12:49 PM IST
ಮಹರಾಜ್ ಘರ್ಜನೆಗೆ ಸೋಲೊಪ್ಪಿಕೊಂಡ ಕಿವೀಸ್

ಸಾರಾಂಶ

ಯುವ ಎಡಗೈ ಸ್ಪಿನ್ನರ್ ಕೇಶವ್ ಮಹರಾಜ್ ಶಿಸ್ತುಬದ್ಧ ದಾಳಿಗೆ ನಿರುತ್ತರವಾದ ಕಿವೀಸ್ ಪಡೆ ತವರಿನಲ್ಲೇ ತೀವ್ರ ಮುಖಭಂಗ ಎದುರಿಸುವಂತಾಯಿತು.

ವೆಲ್ಲಿಂಗ್ಟನ್(ಮಾ.18): ಕೇಶವ್ ಮಹರಾಜ್ ಮಾರಕ ಸ್ಪಿನ್'ಗೆ(40/6) ತತ್ತರಿಸಿದ ನ್ಯೂಜಿಲ್ಯಾಂಡ್ ತಂಡ ಮೂರೇ ದಿನಕ್ಕೆ ದಕ್ಷಿಣ ಆಫ್ರಿಕಾ ತಂಡದೆದುರು ಶರಣಾಗಿದೆ.

ಯುವ ಎಡಗೈ ಸ್ಪಿನ್ನರ್ ಕೇಶವ್ ಮಹರಾಜ್ ಶಿಸ್ತುಬದ್ಧ ದಾಳಿಗೆ ನಿರುತ್ತರವಾದ ಕಿವೀಸ್ ಪಡೆ ತವರಿನಲ್ಲೇ ತೀವ್ರ ಮುಖಭಂಗ ಎದುರಿಸುವಂತಾಯಿತು.

ವೆಲ್ಲಿಂಗ್ಟನ್'ನಲ್ಲಿ ನಡೆದ ಎರಡನೇ ಟೆಸ್ಟ್'ನಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲ್ಯಾಂಡ್ 268 ರನ್'ಗಳಿಗೆ ಸರ್ವಪತನ ಕಂಡಿತು. ಇದಕ್ಕುತ್ತರವಾಗಿ ದಕ್ಷಿಣ ಆಫ್ರಿಕಾ 359 ರನ್'ಗಳಿಸಿತ್ತು.

ಇದಾದ ನಂತರ ಎರಡನೇ ಇನಿಂಗ್ಸ್ ಆರಂಭಿಸಿದ ಕಿವೀಸ್ ಪಡೆ ಕೇವಲ 171 ರನ್'ಗಳಿಗೆ ಆಲೌಟ್ ಆಗುವ ಮೂಲಕ 83 ರನ್'ಗಳ ಗುರಿ ನೀಡಿತು. ಅಲ್ಪಗುರಿ ಬೆನ್ನತ್ತಿದ ಹರಿಣಗಳ ಪಡೆ ಕೇವಲ ಎರಡು ವಿಕೆಟ್ ಕಳೆದುಕೊಂಡು ಕೇವಲ ಮೂರೇ ದಿನಗಳಲ್ಲಿ ಜಯದ ನಗೆ ಬೀರಿತು.

ಆಫ್ರಿಕಾ ಪರ ಕೇಶವ್ ಮಹರಾಜ್ ಕೇವಲ 40 ರನ್ ನೀಡಿ 6 ಪಡೆದು ತಂಡ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಮೂಲಕ ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡ 1-0 ಅಂತರದಲ್ಲಿ ಮುನ್ನೆಡೆ ಕಾಯ್ದುಕೊಂಡಿತು. ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಕಂಡಿದ್ದು, ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 25ರಂದು ಹ್ಯಾಮಿಲ್ಟನ್'ನಲ್ಲಿ ನಡೆಯಲಿದೆ.     

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?