
ಕೊಲಂಬೊ(ಸೆ.30): ಶ್ರೀಲಂಕಾ ಕ್ರಿಕೆಟ್ ತಂಡದ ಮಾಜಿ ನಾಯಕರಾದ ಕುಮಾರ ಸಂಗಾಕ್ಕಾರ ಮತ್ತು ಮಹೇಲ ಜಯವರ್ಧನೆ ಅವರನ್ನು ಲಂಕಾ ಕ್ರಿಕೆಟ್ ಮಂಡಳಿಯ ಉನ್ನತ ಅಧಿಕಾರಿಗಳ ಸಮಿತಿಯಲ್ಲಿ ನೇಮಕ ಮಾಡಲಾಗಿದೆ.
ಇತ್ತೀಚಿನ ದಿನಗಳಲ್ಲಿ ಲಂಕಾ ಕ್ರಿಕೆಟ್ ತಂಡ ಕಳಪೆ ಪ್ರದರ್ಶನದಿಂದ ಕಂಗೆಟ್ಟಿರುವುದರಿಂದ ಈ ಇಬ್ಬರೂ ಮಾಜಿ ಆಟಗಾರರನ್ನು ಕ್ರಿಕೆಟ್ ಮಂಡಳಿಯಲ್ಲಿ ನೇಮಕ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.
ಕೆಲ ದಿನಗಳ ಹಿಂದಷ್ಟೇ ಶ್ರೀಲಂಕಾ ತಂಡ 0-9 ರಿಂದ ಭಾರತ ವಿರುದ್ಧದ ಸರಣಿಯಲ್ಲಿ ವೈಟ್ ವಾಶ್ ಆಗಿತ್ತು. ಇದು ಲಂಕಾ ಕ್ರಿಕೆಟ್ ಮಂಡಳಿಗೆ ಸಾಕಷ್ಟು ಅವಮಾನ ತರಿಸಿತ್ತು.
ಸಂಗಾಕ್ಕಾರ ಮತ್ತು ಜಯವರ್ಧನೆ ಅವರನ್ನು ಮಾಜಿ ಆಟಗಾರರಾಗಿರುವ ಅರವಿಂದ ಡಿಸಿಲ್ವಾ ಮತ್ತು ಹೊಂಕೊ ಹೆಮಕಾ ಅಮರಾಸೂರಿಯಾ ಅವರಿರುವ ಸಮಿತಿಗೆ ನೇಮಕ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.