
ಕೌಲಾಲಂಪುರ: ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಶ್ರೀಕಾಂತ್ ಸೋಲಿನೊಂದಿಗೆ ಭಾರತದ ಸವಾಲು ಅಂತ್ಯವಾಗಿದೆ.
ಮಲೇಷ್ಯಾ ಓಪನ್: ಕ್ವಾರ್ಟರ್ ಫೈನಲ್’ಗೆ ಲಗ್ಗೆಯಿಟ್ಟ ಶ್ರೀಕಾಂತ್
ತಾರಾ ಶಟ್ಲರ್ ಕಿದಂಬಿ ಶ್ರೀಕಾಂತ್, ಪುರುಷರ ಸಿಂಗಲ್ಸ್ ಕ್ವಾರ್ಟರ್ ಫೈನಲ್ನಲ್ಲಿ ಹಾಲಿ ಒಲಿಂಪಿಕ್ಸ್ ಚಾಂಪಿಯನ್ ಚೀನಾದ ಚೆನ್ ಲಾಂಗ್ ವಿರುದ್ಧ 18-21, 19-21 ಗೇಮ್ಗಳಲ್ಲಿ ಪರಾಭವಗೊಂಡು ಹೊರಬಿದ್ದರು. ಈ ಋುತುವಿನಲ್ಲಿ ಮೊದಲ ಪ್ರಶಸ್ತಿ ಜಯಿಸುವ ಶ್ರೀಕಾಂತ್ ಕನಸಿಗೆ ಮತ್ತೆ ಪೆಟ್ಟು ಬಿದ್ದಂತಾಗಿದೆ.
ಶುಕ್ರವಾರ ನಡೆದ ಪಂದ್ಯದ ಮೊದಲ ಗೇಮ್ನಲ್ಲಿ ಶ್ರೀಕಾಂತ್ 16-11ರ ಮುನ್ನಡೆ ಹೊಂದಿದ್ದರು, 2ನೇ ಗೇಮ್ನಲ್ಲಿ 7-11ರಿಂದ ಹಿಂದಿದ್ದರೂ ಪುಟಿದೆದ್ದು 19-19ರಲ್ಲಿ ಸಮಬಲ ಸಾಧಿಸಿದರು. ಆದರೂ ಪಂದ್ಯ ಜಯಿಸಲು ಸಾಧ್ಯವಾಗಲಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.