
ಕೋಲ್ಕತಾ(ಮಾ.22): ಭಾರತ ಕ್ರಿಕೆಟ್ ತಂಡದ ವೇಗಿ ಮೊಹಮದ್ ಶಮಿ ವಿರುದ್ಧ ಕೊಲೆ ಯತ್ನ ಆರೋಪ ಮಾಡಿರುವ ಪತ್ನಿ ಹಸೀನ್ ಜಹಾನ್, ಶುಕ್ರವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗುವ ಸಾಧ್ಯತೆ ಇದೆ.
ಮುಖ್ಯಮಂತ್ರಿ ಕಚೇರಿಯ ಮೂಲಗಳ ಪ್ರಕಾರ, ಜಹಾನ್'ಗೆ ದೂರವಾಣಿ ಮೂಲಕ ರಾಜ್ಯ ವಿಧಾನಸಭೆಯಲ್ಲಿ ಮಮತಾರನ್ನು ಭೇಟಿಯಾಗಲು ಸೂಚಿಸಲಾಗಿದೆ ಎನ್ನಲಾಗಿದೆ.
‘ಶುಕ್ರವಾರ ಮುಖ್ಯಮಂತ್ರಿಯನ್ನು ಭೇಟಿಯಾಗುವಂತೆ ಹಸೀನ್ಗೆ ತಿಳಿಸಲಾಗಿದೆ. ಒಬ್ಬರೇ ಬರುವಂತೆ ಸೂಚಿಸಲಾಗಿದ್ದು, ವಕೀಲರು ಇಲ್ಲವೇ ಕುಟಂಬ ಸದಸ್ಯರನ್ನು ಕರೆದುಕೊಂಡು ಬರದಂತೆ ತಿಳಿಸಲಾಗಿದೆ’ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಸೋಮವಾರ ಹಸೀನ್, ಮಮತಾರ ನಿವಾಸಕ್ಕೆ ತೆರಳಿ ಅವರನ್ನು ಭೇಟಿಯಾಗಬೇಕೆಂದು ಮನವಿ ಸಲ್ಲಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.