
ಢಾಕಾ(ಮಾ.03): ಕೈಬೆರಳಿನ ಗಾಯದಿಂದ ಬಳಲುತ್ತಿರುವ ಬಾಂಗ್ಲಾದೇಶ ತಂಡದ ನಾಯಕ ಶಕೀಬ್ ಅಲ್ ಹಸನ್ ನಿದಹಾಶ್ ಟ್ರೋಫಿಯಿಂದ ಹೊರಬಿದ್ದಿದ್ದಾರೆ.
ಶ್ರೀಲಂಕಾದಲ್ಲಿ ನಡೆಯಲಿರುವ ಭಾರತ-ಬಾಂಗ್ಲಾದೇಶ ಹಾಗೂ ಲಂಕಾ ನಡುವಿನ ತ್ರಿಕೋನ ಟಿ20 ಸರಣಿಯು ಇದೇ ತಿಂಗಳು 6ರಿಂದ ಆರಂಭವಾಗಲಿದ್ದು, ಬಾಂಗ್ಲಾದೇಶ ಶಕೀಬ್ ಅನುಪಸ್ಥಿತಿಯಲ್ಲಿ ಕಣಕ್ಕಿಳಿಯಲಿದೆ. ಶಕೀಬ್ ಸ್ಥಾನಕ್ಕೆ ಯುವ ಬ್ಯಾಟ್ಸ್'ಮನ್ ಲಿಟನ್ ದಾಸ್ ತಂಡ ಕೂಡಿಕೊಂಡಿದ್ದಾರೆ.
ಇದೀಗ ಟಿ20 ಸರಣಿಯಲ್ಲಿ ಬಾಂಗ್ಲಾದೇಶ ತಂಡವನ್ನು ಉಪನಾಯಕ ಮೊಹಮ್ಮದುಲ್ಲಾ ರಿಯಾದ್ ಮುನ್ನಡೆಸಲಿದ್ದಾರೆ.
ನಿದಹಾಶ್ ಟ್ರೋಫಿಯ ಉದ್ಘಾಟನಾ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ವಿಶ್ವ ನಂ.1 ಶ್ರೇಯಾಂಕಿತ ತಂಡ ಭಾರತ ಮುಖಾಮುಖಿಯಾಗಲಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.