ಅಜೇಯವಾಗಿ ಕ್ವಾರ್ಟರ್ ಫೈನಲ್'ಗೆ ಲಗ್ಗೆಯಿಟ್ಟ ಕರ್ನಾಟಕ

Published : Mar 06, 2017, 02:35 PM ISTUpdated : Apr 11, 2018, 01:06 PM IST
ಅಜೇಯವಾಗಿ ಕ್ವಾರ್ಟರ್ ಫೈನಲ್'ಗೆ ಲಗ್ಗೆಯಿಟ್ಟ ಕರ್ನಾಟಕ

ಸಾರಾಂಶ

ಅಂತಿಮವಾಗಿ ಕರ್ನಾಟಕ 7 ವಿಕೆಟ್ ಕಳೆದುಕೊಂಡು ಅಜೇಯವಾಗಿ ಕ್ವಾರ್ಟರ್ ಫೈನಲ್ ತಲುಪಿತು.     

ಕೋಲ್ಕತ(ಮಾ.06): ಮಯಾಂಕ ಅಗರ್ವಾಲ್ ಅವರ ಭರ್ಜರಿ ಅರ್ಧಶತಕದ ನೆರವಿನಿಂದ ಕರ್ನಾಟಕ ತಂಡ ವಿಜಯ್ ಹಜಾರೆ ಟ್ರೋಫಿಯಲ್ಲಿ ಅಜೇಯವಾಗಿ ಕ್ವಾರ್ಟರ್'ಫೈನಲ್ ಪ್ರವೇಶಿಸಿದೆ.

ಇಲ್ಲಿನ ಜಾಧವಪುರ ವಿವಿ ಮೈದಾನದಲ್ಲಿ ನಡೆದ ಡಿ ಗುಂಪಿನ ಪಂದ್ಯಾವಳಿಯಲ್ಲಿ ಛತ್ತೀಸ್'ಗಡ ವಿರುದ್ಧ 3 ವಿಕೆಟ್'ಗಳ ಜಯ ದಾಖಲಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಛತ್ತೀಸ್'ಗಡ ತಂಡ ಕೇವಲ 199 ರನ್'ಗಳಿಗೆ ಸರ್ವಪತನ ಕಂಡಿತು. ಛತ್ತೀಸ್'ಗಡ ಪರ ಅಭಿಮನ್ಯು ರವೀಂದ್ರಪಾಲ್ ಸಿಂಗ್ ಚೌಹ್ಹಾಣ್ (58) ಮತ್ತು ನಾಯಕ ಮೊಹಮ್ಮದ್ ಕೈಫ್ 43 ರನ್ ಬಾರಿಸಿ ಸವಾಲಿನ ಮೊತ್ತವನ್ನೇ ಪೇರಿಸಿದರು. ಕರ್ನಾಟಕ ಪರ ಶಿಸ್ತಿನ ದಾಳಿ ನಡೆಸಿದ ವಿನಯ್ ಕುಮಾರ್ 3 ವಿಕೆಟ್ ಪಡೆದರೆ, ಪ್ರಸಿದ್ ಕ್ರಿಷ್ಣ ಎರಡು ವಿಕೆಟ್ ಪಡೆದರು. ಇನ್ನು ಬಿನ್ನಿ, ಮೋರೆ, ಗೌತಮ್ ಹಾಗೂ ಶ್ರೇಯಸ್ ತಲಾ ಒಂದು ವಿಕೆಟ್ ಪಡೆದರು.

ಸವಾಲಿನ ಮೊತ್ತ ಬೆನ್ನತ್ತಿದ ಕರ್ನಾಟಕ ಉತ್ತಮ ಆರಂಭವನ್ನೇ ಪಡೆಯಿತು. ಮೊದಲ ವಿಕೆಟ್'ಗೆ 51 ರನ್ ಕಲೆಹಾಕಿದ ತಂಡ. ಆನಂತರ ಉತ್ತಪ್ಪ ಅವರನ್ನು ಕಳೆದುಕೊಂಡಿತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಮಯಾಂಕ್ ಅಗರ್'ವಾಲ್'ಗೆ ಉತ್ತಮ ಸಾಥ್ ನೀಡಿದರು.

ಅಂತಿಮವಾಗಿ ಕರ್ನಾಟಕ 7 ವಿಕೆಟ್ ಕಳೆದುಕೊಂಡು ಅಜೇಯವಾಗಿ ಕ್ವಾರ್ಟರ್ ಫೈನಲ್ ತಲುಪಿತು.     

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Lionel Messi India visit: ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ನೀಡಿದ ಮೆಸ್ಸಿ!
ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?