
ಮೆಲ್ಬರ್ನ್[ಡಿ.22]: ಡಿ.26ರಿಂದ ಆರಂಭಗೊಳ್ಳಲಿರುವ ಆಸ್ಪ್ರೇಲಿಯಾ ವಿರುದ್ಧ 3ನೇ ಟೆಸ್ಟ್ನಲ್ಲಿ ಭಾರತ ತಂಡ ಆಲ್ರೌಂಡರ್ ಹಾರ್ದಿಕ್ ಪಾಂಡ್ಯರನ್ನು ಕಣಕ್ಕಿಳಿಸಬೇಕು ಎಂದು ಆಸ್ಪ್ರೇಲಿಯಾದ ಮಾಜಿ ಕ್ರಿಕೆಟಿಗ ಮೈಕಲ್ ಹಸ್ಸಿ ಅಭಿಪ್ರಾಯಪಟ್ಟಿದ್ದಾರೆ.
‘ಮೆಲ್ಬರ್ನ್ನಲ್ಲಿ ವಾತಾವರಣ, ಪರ್ತ್’ಗಿಂತ ಸಂಪೂರ್ಣ ವಿಭಿನ್ನವಾಗಿ ಇರಲಿದೆ. ಭಾರತೀಯ ವೇಗಿಗಳು ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ್ದಾರೆ. ಹಾರ್ದಿಕ್ ಪಾಂಡ್ಯರನ್ನು ಆಡಿಸುವ ಮೂಲಕ ಭಾರತ ತಂಡ ಸಮತೋಲನ ಕಂಡುಕೊಳ್ಳಲಿದೆ. ಅವರೊಬ್ಬ ಸಮರ್ಥ ಆಲ್ರೌಂಡರ್. ಎಂಸಿಜಿ ಪಿಚ್, ಪಾಂಡ್ಯ ಬೌಲಿಂಗ್ ಶೈಲಿಗೆ ಸೂಕ್ತವೆನಿಸಿದೆ’ ಎಂದು ಹಸ್ಸಿ ಹೇಳಿದ್ದಾರೆ.
ಭಾರತ-ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಸರಣಿಯಲ್ಲಿ ಮೊದಲೆರಡು ಟೆಸ್ಟ್’ಗಳಲ್ಲಿ ಉಭಯ ತಂಡಗಳು 1-1 ರ ಸಮಬಲ ಸಾಧಿಸಿದ್ದು, ಮೆಲ್ಬರ್ನ್ ಟೆಸ್ಟ್’ನಲ್ಲಿ ಮುನ್ನಡೆ ಸಾಧಿಸಲು ಎರಡು ತಂಡಗಳು ತುದಿಗಾಲಿನಲ್ಲಿ ನಿಂತಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.