ಪಾಕ್ ಸೋಲಿನ ಶಾಕ್’ನಿಂದ ಮಿಯಾಂದಾದ್ ಹೊರಬಂದಿಲ್ಲ

Published : Oct 04, 2016, 12:13 PM ISTUpdated : Apr 11, 2018, 01:10 PM IST
ಪಾಕ್ ಸೋಲಿನ ಶಾಕ್’ನಿಂದ ಮಿಯಾಂದಾದ್ ಹೊರಬಂದಿಲ್ಲ

ಸಾರಾಂಶ

ನವದೆಹಲಿ(ಅ.04): ಭಾರತದ ವಿರುದ್ಧ ಕಿಡಿಕಾರಿದ್ದ ಪಾಕಿಸ್ತಾನ ಕ್ರಿಕೆಟಿಗ ಜಾವೇದ್ ಮಿಯಾಂದಾದ್ ಹೇಳಿಕೆಗೆ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ತಿರುಗೇಟು ನೀಡಿದ್ದಾರೆ. ಯುದ್ಧಭೂಮಿ ಹಾಗೂ ಕ್ರಿಕೆಟ್’ನಲ್ಲಿ ಭಾರತದೆದುರು ಕಳಪೆ ಪ್ರದರ್ಶನ ತೋರಿರುವ ಶಾಕ್’ನಿಂದ ಮಿಯಾಂದಾದ್ ಹೊರಬಂದಿಲ್ಲ ಎಂದು ಲೇವಡಿ ಮಾಡಿದ್ದಾರೆ.

ಗಡಿ ನಿಯಂತ್ರಣ ರೇಖೆ ದಾಟಿ ಸರ್ಜಿಕಲ್ ದಾಳಿ ನಡೆಸಿರುವ ಭಾರತದ ಕ್ರಮಕ್ಕೆ ಪ್ರತಿಕ್ರಿಯಿಸಿದ್ದ ಮಾಜಿ ಕ್ರಿಕೆಟಿಗ, ಭಾರತವನ್ನು ಪೂರ್ಣಪ್ರಮಾಣದಲ್ಲಿ ಎದುರಿಸಲು ಪಾಕಿಸ್ತಾನ ಸಿದ್ದವಿದೆ ಎಂದಿದ್ದರು.

ಪಾಕಿಸ್ತಾನವು ಇನ್ನೂ 1965, 1971 ಹಾಗೂ ಕಾರ್ಗಿಲ್ ಯುದ್ಧದ ಆಘಾತದಿಂದ ಹೊರಬಂದಿಲ್ಲ. ಅದೇರೀತಿ ಪಾಕಿಸ್ತಾನವು ವಿಶ್ವಕಪ್ ಕ್ರಿಕೆಟ್’ನಲ್ಲಿ ಒಮ್ಮೆಯೂ ಭಾರತವನ್ನು ಮಣಿಸಲು ಸಾಧ್ಯವಾಗಿಲ್ಲ. ಅದು ಕ್ರಿಕೆಟ್ ಆಗಿರಲಿ ಇಲ್ಲವೇ ಯುದ್ಧವೇ ಆಗಿರಲಿ ಭಾರತ ಮನಸ್ಸುಮಾಡಿದರೆ, ಇನ್ನೊಮ್ಮೆ ಪಾಕಿಸ್ತಾನವನ್ನು ನೆಲಕಚ್ಚಿಸಲು ಸಶಕ್ತವಾಗಿದೆ ಎಂದು ಬಿಜೆಪಿ ಸಂಸದರೂ ಆಗಿರುವ ಅನುರಾಗ್ ಠಾಕೂರ್ ಹೇಳಿದ್ದಾರೆ.

ನಿಮಗೆ ನಿಮ್ಮ ಜನಗಳ ಮೇಲೆ ವಿಶ್ವಾಸವಿದ್ದರೆ, ನಿಮ್ಮ ಸಂಬಂಧಿ ಹಾಗೂ ಭೂಗತ ಲೋಕದ ಡಾನ್ ದಾವೂದ್ ಇಬ್ರಾಹಿಂ ಭಾರತಕ್ಕೆ ಬರಲು ಹೇಳಿ ಎಂದು ಠಾಕೂರ್ ಪಾಕ್ ಕ್ರಿಕೆಟಿಗನಿಗೆ ಸವಾಲು ಎಸೆದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?