
ಬೆಂಗಳೂರು(ಜು.26) ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಮಿಥಾಲಿ ರಾಜ್ ರನೌಟ್ ಆಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಈ ಬಗ್ಗೆ ಇದೇ ಮೊದಲ ಬಾರಿಗೆ ಭಾರತ ವನಿತೆಯರ ತಂಡದ ನಾಯಕಿ ಮಿಥಾಲಿ ರಾಜ್ ತುಟಿಬಿಚ್ಚಿದ್ದಾರೆ.
ಮಿಥಾಲಿ ರಾಜ್ ರನೌಟ್ ಹಿಂದೆ ಮ್ಯಾಚ್ ಫಿಕ್ಸಿಂಗ್ ನಡೆದಿರುಬಹುದು ಎಂಬಂತಹ ಅನುಮಾನಗಳು ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದ್ದವು.
ಈ ಕುರಿತು ಪ್ರತಿಕ್ರಿಯಿಸಿದ ಮಿಥಾಲಿ, ‘ರನ್ ಓಡುವ ವೇಳೆ ನನ್ನ ಶೂನ ಸ್ಪೈಕ್ (ಶೂನಲ್ಲಿರುವ ಮೊಳೆ) ಪಿಚ್'ನ ಮಧ್ಯದಲ್ಲಿ ಕಚ್ಚಿಕೊಂಡು ಬಿಟ್ಟಿತ್ತು. ಡೈವ್ ಹೊಡೆಯುವ ಪರಿಸ್ಥಿತಿಯಲ್ಲಿಯೂ ಇರಲಿಲ್ಲ. ನಾನು ಅಸಹಾಯಕಳಾಗಿದ್ದೆ. ಬಹುಶಃ ಪಂದ್ಯದ ಪ್ರಸಾರದ ವೇಳೆ ಇದನ್ನು ಸ್ಪಷ್ಟವಾಗಿ ಪ್ರಸಾರಗೊಳಿಸದ ಕಾರಣ ಇದು ಅಭಿಮಾನಿಗಳಿಗೆ ತಿಳಿಯಲಿಲ್ಲ ಎನಿಸುತ್ತದೆ’ ಎಂದು ರನೌಟ್ ಹಿಂದಿನ ರಹಸ್ಯ ಬಿಚ್ಚಿಟ್ಟಿದ್ದಾರೆ.
ಮಿಥಾಲಿ ರಾಜ್ ಫೈನಲ್ ಪಂದ್ಯದಲ್ಲಿ 17 ಗಳಿಸಿದ್ದಾಗ ರನೌಟ್ ಆಗುವ ಮೂಲಕ ಪೆವಿಲಿಯನ್ ಸೇರಿದ್ದರು. ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ದ 9 ರನ್'ಗಳ ಸೋಲು ಕಾಣುವ ಮೂಲಕ ಭಾರತ ವನಿತೆಯರ ತಂಡ ಚೊಚ್ಚಲ ವಿಶ್ವಕಪ್ ಗೆಲ್ಲುವ ಆಸೆಯನ್ನು ಕೈಚೆಲ್ಲಿತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.