
ಉತ್ತರ ಪ್ರದೇಶ(ಜು.21): ಪತ್ನಿಯ ದೂರು, ಪೊಲೀಸ್ ಠಾಣೆ, ಕೋರ್ಟ್, ಇಂಜುರಿ ಸಮಸ್ಯೆ ಸೇರಿದಂತೆ ಹಲವು ಅಡೆ ತಡೆ ಎದುರಿಸಿದ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಇದೀಗ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗೋ ಮೂಲಕ ಮತ್ತೆ ಕ್ರಿಕೆಟ್ ಮೈದಾನಕ್ಕೆ ಮರಳಿದ್ದಾರೆ.
ಪತ್ನಿ ಜೊತೆಗಿನ ಕಾನೂನು ಹೋರಾಟ ಇನ್ನು ಅಂತ್ಯಗೊಂಡಿಲ್ಲ. ಹೀಗಾಗಿ ಸ್ವತಃ ಮೊಹಮ್ಮದ್ ಶಮಿ ವೈಯುಕ್ತಿ ಬದುಕು ಇನ್ನು ಕತ್ತಲೆಯಲ್ಲಿದೆ. ಆದರೆ ಶಮಿ ತಮ್ಮ ಹುಟ್ಟೂರಾದ ಅಮೋರಾಹದ ವಿಕಲಚೇತನರ ಬಾಳಲ್ಲಿ ಬೆಳಕಾಗಿದ್ದಾರೆ.
ಇದನ್ನು ಓದಿ:ಬಿಸಿಸಿಐ ವಿರುದ್ಧ ಮೊಹಮ್ಮದ್ ಶಮಿ ಪತ್ನಿ ಗರಂ ಆಗಿದ್ದೇಕೆ?
ವಿಕಲಚೇತನರಿಗೆ ಮೂರು ಚಕ್ರದ ಸೈಕಲ್ ವಿತರಿಸಿದ್ದಾರೆ. ತಮ್ಮ ಸಾಮಾಜಿಕ ಕಾರ್ಯವನ್ನ ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಶಮಿ ತಮ್ಮ ಮಾನಸಿಕ ತೊಳಲಾಟದಿಂದ ಹೊರಬರೋ ಪ್ರಯತ್ನ ಮಾಡಿದ್ದಾರೆ.
ಇದನ್ನು ಓದಿ: ಶಮಿ ಟೆಸ್ಟ್ ಆಯ್ಕೆ ಬೆನ್ನಲ್ಲೇ ಕೋಲ್ಕತ್ತಾ ಪೊಲೀಸರಿಂದ ನೊಟಿಸ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.