ಗರಿಷ್ಠ ಮೊತ್ತಕ್ಕೆ ಹರಾಜಾದ ಅಭಿಮನ್ಯು ಮಿಥುನ್ ಕೆಪಿಎಲ್‌ ಆಡೋದು ಡೌಟ್

Published : Jul 23, 2018, 09:18 PM ISTUpdated : Jul 23, 2018, 09:25 PM IST
ಗರಿಷ್ಠ ಮೊತ್ತಕ್ಕೆ ಹರಾಜಾದ ಅಭಿಮನ್ಯು ಮಿಥುನ್ ಕೆಪಿಎಲ್‌ ಆಡೋದು ಡೌಟ್

ಸಾರಾಂಶ

ಕರ್ನಾಟಕ ಪ್ರಿಮಿಯರ್ ಲೀಗ್  ಹರಾಜಿನಲ್ಲಿ ಗರಿಷ್ಠ ಮೊತ್ತಕ್ಕೆ ವೇಗಿ ಅಭಿಮನ್ಯು ಮಿಥುನ್ ಅವರನ್ನ ಖರೀದಿಸಿದ ಶಿವಮೊಗ್ಗ ಲಯನ್ಸ್ ತಂಡಕ್ಕೆ ಇದೀಗ ಆತಂಕ ಶುರುವಾಗಿದೆ. ಅಷ್ಟಕ್ಕೂ ಶಿವಮೊಗ್ಗ ತಂಡದ ಆತಂಕಕ್ಕೆ ಕಾರಣವೇನು? ಇಲ್ಲಿದೆ ವಿವರ.

ಬೆಂಗಳೂರು(ಜು.23): ಕರ್ನಾಟಕ ಪ್ರಿಮಿಯರ್ ಲೀಗ್ ಟೂರ್ನಿಗೆ ಫ್ರಾಂಚೈಸಿಗಳ ತಯಾರಿ ಆರಂಭಗೊಂಡಿದೆ. ಈಗಾಗಲೇ ಕೆಪಿಎಲ್ ಹರಾಜಿನಲ್ಲಿ ಅಳೆದು ತೂಗಿ ಆಟಗಾರರನ್ನ ಖರೀದಿಸಿರುವ ಮಾಲೀಕರು ಟೂರ್ನಿಯನ್ನ ಎದುರು ನೋಡುತ್ತಿದ್ದಾರೆ.

ಈ ಬಾರಿಯ ಕೆಪಿಎಲ್ ಹರಾಜಿನಲ್ಲಿ ವೇಗಿ ಅಭಿಮನ್ಯು ಮಿಥುನ್ ಗರಿಷ್ಠ ಮೊತ್ತಕ್ಕೆ ಬಿಕರಿಯಾಗಿದ್ದರು. ಮಿಥುನ್ 8.30 ಲಕ್ಷ ರೂಪಾಯಿಗೆ ಶಿವಮೊಗ್ಗ ಲಯನ್ಸ್ ಪಾಲಾಗಿದ್ದರು. ಹರಾಜಿನಲ್ಲಿ ಅನುಭವಿ ವೇಗಿಯನ್ನ ಜಿದ್ದಿಗಿ ಬಿದ್ದು ಖರೀದಿಸಿದ ಶಿವಮೊಗ್ಗ ಲಯನ್ಸ್‌ಗೆ ಇದೀಗ ಆತಂಕ ಶುರುವಾಗಿದೆ. ಯಾಕೆಂದರೆ ಅಭಿಮನ್ಯು ಮಿಥುನ್ ಕೆಪಿಎಲ್ ಟೂರ್ನಿ ಆಡೋದು ಅನುಮಾನವಾಗಿದೆ.

ಇದನ್ನು ಓದಿ: ಕೆಪಿಎಲ್ ಹರಾಜಿನ ಬಳಿಕ 7 ತಂಡಗಳು ಹೇಗಿದೆ? ಇಲ್ಲಿದೆ ಸಂಪೂರ್ಣ ವಿವರ

ಆಗಸ್ಟ್ 17 ರಿಂದ ಆರಂಭಗೊಳ್ಳಲಿರುವ ದುಲೀಪ್ ಟ್ರೋಫಿಗಾಗಿ ಬಿಸಿಸಿಐ ತಂಡವನ್ನ ಆಯ್ಕೆ ಮಾಡಿದೆ. ಇಂಡಿಯಾ ರೆಡ್ ತಂಡದಲ್ಲಿ ಅಭಿಮನ್ಯು ಮಿಥುನ್ ಸ್ಥಾನ ಪಡೆದಿದ್ದಾರೆ. ತಮಿಳುನಾಡಿನ ದಿಂಡುಗಲ್‌ನಲ್ಲಿ ನಡೆಯಲಿರುವ ದುಲೀಪ್ ಟ್ರೋಫಿಯಲ್ಲಿ ಮಿಥುನ್ ಪಾಲ್ಗೊಳ್ಳಲಿದ್ದಾರೆ.

ಇದನ್ನು ಓದಿ: ಕೆಪಿಎಲ್ ಹರಾಜು 2018: ಗರಿಷ್ಠ ಮೊತ್ತಕ್ಕೆ ಸೇಲಾದ ಐವರು ಕ್ರಿಕೆಟಿಗರು!

ಕೆಪಿಎಲ್ ಟೂರ್ನಿ ಆಗಸ್ಟ್ 15 ರಿಂದ ಆರಂಭಗೊಳ್ಳಲಿದೆ. ಹೀಗಾಗಿ ಮಿಥುನ್ ಕೆಪಿಎಲ್ ಟೂರ್ನಿ ಆಡೋದು ಅನುಮಾನ. ದುಲೀಪ್ ಟ್ರೋಫಿ ಸರಣಿ ಇಂಡಿಯಾ ಬ್ಲೂ, ಇಂಡಿಯಾ ರೆಡ್ ಹಾಗೂ ಇಂಡಿಯಾ ಗ್ರೀನ್ ಮೂರು ತಂಡಗಳ ನಡುವೆ ನಡೆಯಲಿದೆ.

ಇದನ್ನು ಓದಿ: ಕೆಪಿಎಲ್ ಹರಾಜು 2018: ಅಚ್ಚರಿ ಮೂಡಿಸಿದ ಆಟಗಾರರಿವರು

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India vs New Zealand: ಕೊಹ್ಲಿ ಕ್ಲಾಸಿಕ್‌ ಇನ್ನಿಂಗ್ಸ್‌, ನ್ಯೂಜಿಲೆಂಡ್‌ ವಿರುದ್ಧ 4 ವಿಕೆಟ್‌ ಗೆಲುವು ಕಂಡ ಟೀಮ್‌ ಇಂಡಿಯಾ
ಯಶ್‌ ದಯಾಳ್‌ ಬಳಿಕ ಮತ್ತೊಬ್ಬ ಆರ್‌ಸಿಬಿ ಪ್ಲೇಯರ್‌ ಸೋಶಿಯಲ್‌ ಮೀಡಿಯಾ ರಂಗಿನಾಟ ಬಯಲು..!