
ಕೋಲ್ಕತಾ(ಮಾ.02): ಟೀಂ ಇಂಡಿಯಾ ಜೆರ್ಸಿ ತೊಡುವ ಮುನ್ನ ಖರಗ್'ಪುರದ ರೇಲ್ವೆ ಸ್ಟೇಷನ್ನಲ್ಲಿ ಟಿಟಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಂಚಿ ಕ್ರಿಕೆಟಿಗ ಎಂ.ಎಸ್. ಧೋನಿ, ಸದ್ಯ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಪಂದ್ಯಾವಳಿಯಲ್ಲಿ ಜಾರ್ಖಂಡ್ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಇದೇ ಟೂರ್ನಿಗಾಗಿ 13 ವರ್ಷಗಳ ಬಳಿಕ ರೈಲಿನಲ್ಲಿ ಪ್ರಯಾಣಿಸಿ ಸುದ್ದಿಯಾದ ಧೋನಿ, ಪ್ರಯಾಣದ ವೇಳೆ ಖರಗ್'ಪುರ ಸ್ಟೇಷನ್'ನ ಚಾಯ್ ವಾಲಾ ಥಾಮಸ್ ಅವರನ್ನು ಗುರುತಿಸಿದ್ದಾರೆ. ತಾನು ಟಿಟಿಯಾಗಿದ್ದಾಗ ಇದೇ ಥಾಮಸ್ ಅಂಗಡಿಯಲ್ಲಿ ಚಹಾ ಸೇವಿಸುತ್ತಿದ್ದ ಧೋನಿ, ಅದನ್ನು ನೆನೆದು ತನ್ನ ಹಳೆಯ ಸ್ನೇಹಿತರಿಗಾಗಿ ಹೋಟೆಲ್ ಒಂದರಲ್ಲಿ ಹಮ್ಮಿಕೊಂಡಿದ್ದ ಔತಣಕೂಟಕ್ಕೆ ಅವರನ್ನೂ ಆಹ್ವಾನಿಸಿ ಹಿರಿತನ ಮೆರೆದರು.
ಧೋನಿಯ ಈ ಔದಾರ್ಯತೆಗೆ ಕರಗಿಹೋದ ಥಾಮಸ್, ಇನ್ನು ಮುಂದೆ ತನ್ನ ಅಂಗಡಿಗೆ ‘ಧೋನಿ ಟೀ ಸ್ಟಾಲ್’ ಎಂದು ನಾಮಕರಣ ಮಾಡುವುದಾಗಿ ನಿರ್ಧರಿಸಿದ್ದಾರಂತೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.