
ಲೀಡ್ಸ್(ಜು.18): ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಸೋಲಿನ ಬಳಿಕ ನಡೆದ ಹಲವು ಘಟನೆಗಳು ಟೀಂ ಇಂಡಿಯಾ ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ಮನ್ ಎಂ ಎಸ್ ಧೋನಿ ಶೀಘ್ರದಲ್ಲೇ ನಿವೃತ್ತಿ ಹೇಳಲಿದ್ದಾರೆ ಅನ್ನೋ ಮಾತುಗಳಿಗೆ ಪುಷ್ಠಿ ನೀಡುತ್ತಿದೆ.
ಇದನ್ನು ಓದಿ: ನಿವೃತ್ತಿಗೆ ಸಜ್ಜಾದ್ರಾ ಎಂ ಎಸ್ ಧೋನಿ ?
ಅಂತಿಮ ಪಂದ್ಯದ ಬಳಿಕ ಅಂಪೈರ್ನಿಂದ ಚೆಂಡು ಪಡೆದ ಎಂ ಎಸ್ ಧೋನಿ ಹೊಟೆಲ್ಗೆ ತೆರಳಲು ಟೀಂ ಇಂಡಿಯಾ ಬಸ್ ಬಳಿ ಬಂದಿದ್ದಾರೆ. ಈ ವೇಳೆ ಧೋನಿಗೆ ಚಿಯರ್ ಅಪ್ ಮಾಡುತ್ತಿದ್ದ ಅಭಿಮಾನಿಗೆ ತಮ್ಮ ಕೀಪಿಂಗ್ ಗ್ಲೌಸ್ ಗಿಫ್ಟ್ ನೀಡಿದ್ದಾರೆ. ಇದು ಧೋನಿ ನಿವೃತ್ತಿಗೆ ಮತ್ತೊಂದು ಸೂಚನೆ ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
3ನೇ ಏಕದಿನ ಸೋಲಿನ ಬಳಿಕ ಎಂ ಎಸ್ ಧೋನಿ ಅಂಪೈರ್ ಬಳಿಯಿಂದ ಚೆಂಡನ್ನ ಕೇಳಿ ಪಡೆದುಕೊಂಡರು. ತಮ್ಮ ಕರಿಯರ್ನ ಅಂತಿಮ ಪಂದ್ಯದ ನೆನಪಿಗಾಗಿ ಧೋನಿ ಬಾಲ್ ಪಡೆದುಕೊಂಡಿದ್ದಾರೆ ಅನ್ನೋ ಮಾತುಗಳು ಕೇಳಿಬಂದಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.