
ನವದೆಹಲಿ[ಡಿ.21]: ‘ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ, ರಣಜಿ ಟೂರ್ನಿಯಲ್ಲಿ ಆಡಿದರೆ ಯುವ ಆಟಗಾರರು ಅವಕಾಶವಂಚಿತರಾಗುತ್ತಾರೆ’ ಎಂದು ಜಾರ್ಖಂಡ್ ತಂಡದ ಕೋಚ್ ರಾಜೀವ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಇತ್ತೀಚೆಗಷ್ಟೇ ಭಾರತ ತಂಡದ ಮಾಜಿ ಆಟಗಾರ ಸುನಿಲ್ ಗವಾಸ್ಕರ್, ಧೋನಿ ಏಕೆ ರಣಜಿ ಟೂರ್ನಿಯಲ್ಲಿ ಆಡುತ್ತಿಲ್ಲ? ಎಂದು ಪ್ರಶ್ನಿಸಿದ್ದರು. ‘ಧೋನಿ ಜಾರ್ಖಂಡ್ ತಂಡವನ್ನು ಏಕೆ ಪ್ರತಿನಿಧಿಸುತ್ತಿಲ್ಲ ಎಂಬ ಮಾತುಗಳು ಕೇಳುತ್ತಿವೆ. ಆದರೆ ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಒಂದು ವೇಳೆ ಧೋನಿ ತಂಡದಲ್ಲಿ ಆಡಿದರೆ, ಆ ಸ್ಥಾನದಲ್ಲಿ ಆಡುವ ಒಬ್ಬ ಯುವ ಆಟಗಾರ ಅವಕಾಶ ವಂಚಿತನಾಗುತ್ತಾನೆ. ಧೋನಿ, ಹಾಗೆ ಮಾಡುತ್ತಾರಾ? ಅಲ್ಲದೆ ಪ್ರತಿ ಯುವ ಆಟಗಾರನೂ ತನಗೆ ದೊರೆಯುವ ಅವಕಾಶಕ್ಕಾಗಿ ಎದುರು ನೋಡುತ್ತಿರುತ್ತಾನೆ ಎಂಬುದು ಎಲ್ಲ ಗಮನದಲ್ಲಿರಲಿ’ ಎಂದು ರಾಜೀವ್ ಹೇಳಿದ್ದಾರೆ.
ಅಂತರಾಷ್ಟ್ರೀಯ ಪಂದ್ಯಗಳಲ್ಲಿ ರನ್ ಬರ ಅನುಭವಿಸುತ್ತಿರುವ ಮಹೇಂದ್ರ ಸಿಂಗ್ ಧೋನಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಕೂಡಿಕೊಳ್ಳಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.