
ಕೋಲ್ಕತಾ(ಏ.21): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್. ಧೋನಿ ವಿಶ್ವ ಶ್ರೇಷ್ಠ ಕ್ರಿಕೆಟಿಗನಾಗಿದ್ದು, ಅವರನ್ನು ಐಪಿಎಲ್ 10ನೇ ಆವೃತ್ತಿಯ ಟೂರ್ನಿಯಲ್ಲಿ ರೈಸಿಂಗ್ ಪುಣೆ ಸೂಪರ್'ಜೈಂಟ್ ತಂಡದ ನಾಯಕತ್ವದಿಂದ ತೆಗೆದದ್ದು ಸರಿಯಲ್ಲ ಎಂದು ಗುಜರಾತ್ ಲಯನ್ಸ್ ತಂಡದ ನಾಯಕ ಸುರೇಶ್ ರೈನಾ ಹೇಳಿದ್ದಾರೆ.
‘‘ಧೋನಿ ಒಬ್ಬ ವಿಶ್ವಮಾನ್ಯ ಕ್ರಿಕೆಟಿಗ. ಅವರನ್ನು ನಾಯಕನ ಸ್ಥಾನದಿಂದ ಇಳಿಸಿದ್ದರಿಂದ ನಿಜಕ್ಕೂ ಬೇಸರವಾಗಿದೆ. ಧೋನಿ ಶ್ರೇಷ್ಠ ಆಟಗಾರ ಎಂದು ನಾನು ಮಾತ್ರ ಹೇಳುತ್ತಿಲ್ಲ. ಇದನ್ನು ವಿಶ್ವವೇ ಹೇಳುತ್ತಿದೆ’’ ಎಂದು ಎಡಗೈ ಬ್ಯಾಟ್ಸ್'ಮನ್ ಅಭಿಪ್ರಾಯಪಟ್ಟಿದ್ದಾರೆ.
ಪ್ರಸಕ್ತ ಐಪಿಎಲ್ ಟೂರ್ನಿಯಲ್ಲಿ ಧೋನಿ 5 ಪಂದ್ಯಗಳಿಂದ 87ರ ಸ್ಟ್ರೈಕ್ ರೇಟ್'ನಲ್ಲಿ 61 ರನ್ ಗಳಿಸಿರಬಹುದು. ಆದರೆ ಮುಂದಿನ ಪಂದ್ಯಗಳಲ್ಲಿ ಧೋನಿ ಸಿಡಿಯಲಿದ್ದಾರೆ ಎಂದು ರೈನಾ ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.