
ನವದೆಹಲಿ(ಡಿ.06): ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮುಂಬರುವ ಐಪಿಎಲ್ ಅವತರಣಿಕೆಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಸೇರುವ ದಾರಿ ಸುಗಮವಾದಂತಾಗಿದೆ. ಇಂದು ನಡೆದ ಐಪಿಎಲ್ ಆಡಳಿತ ಮಂಡಳಿ ಸಭೆಯಲ್ಲಿ 2018ನೇ ಸಾಲಿನ ಐಪಿಎಲ್'ನಲ್ಲಿ ಮೂವರು ಆಟಗಾರರನ್ನು ಪ್ರಾಂಚೈಸಿಗಳು ತಂಡದಲ್ಲಿ ಉಳಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಇಂದು ಐಪಿಎಲ್ ಆಡಳಿತ ಮಂಡಳಿ ಜೊತೆ ಆಡಳಿತಾತ್ಮಕ ಸಮಿತಿ ಆಟಗಾರರನ್ನು ಉಳಿಸಿಕೊಳ್ಳುವಿಕೆ, ಸಂಬಳ ಮುಂತಾದ ವಿಚಾರಗಳ ಕುರಿತಂತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಯಿತು.
ಚೆನ್ನೈ ಸೂಪರ್'ಕಿಂಗ್ಸ್ ಹಾಗೂ ರಾಜಸ್ತಾನ್ ರಾಯಲ್ಸ್ ತಂಡಗಳು ತಮ್ಮ ತಂಡಗಳಲ್ಲಿದ್ದ ಆಟಗಾರರನ್ನು ಉಳಿಸಿಕೊಳ್ಳಬಹುದು ಎಂದು ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌಧರಿ ತಿಳಿಸಿದ್ದಾರೆ.
ಜುಲೈ 2015ರಲ್ಲಿ ಸಿಎಸ್'ಕೆ ಹಾಗೂ ಆರ್'ಆರ್ ತಂಡಗಳ ಮಾಲೀಕರು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದರಿಂದ ಎರಡು ಐಪಿಎಲ್ ಅವತರಣಿಕೆಗಳ ಮಟ್ಟಿಗೆ ಬ್ಯಾನ್ ಮಾಡಲಾಗಿತ್ತು. ಈ ತಂಡಗಳ ಬದಲಿಗೆ ರೈಸಿಂಗ್ ಪುಣೆ ಸೂಪರ್'ಜೈಂಟ್ಸ್ ಹಾಗೂ ಗುಜರಾತ್ ಲಯನ್ಸ್ ತಂಡಗಳು ಎರಡು ವರ್ಷ ಐಪಿಎಲ್'ನಲ್ಲಿ ಪಾಲ್ಗೊಂಡಿದ್ದವು.
2018ನೇ ಸಾಲಿನ ಐಪಿಎಲ್ ಹರಾಜು ಪ್ರಕ್ರಿಯೆ ಫೆಬ್ರವರಿಯಲ್ಲಿ ನಡೆಯಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.