
ನವದೆಹಲಿ[ಏ.14]: ಅಂಪೈರ್ ಜತೆ ವಾಗ್ವಾದ ನಡೆಸಿದ ಪ್ರಕರಣದಲ್ಲಿ ಎಂ.ಎಸ್.ಧೋನಿ ಸುಲಭವಾಗಿ ಪಾರಾದರು. ಅವರನ್ನು 2ರಿಂದ 3 ಪಂದ್ಯಗಳಿಗೆ ನಿಷೇಧಿಸಬೇಕಿತ್ತು ಎಂದು ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಭಿಪ್ರಾಯಿಸಿದ್ದಾರೆ.
‘ಧೋನಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕಿತ್ತು. ಎರಡು ಇಲ್ಲವೇ ಮೂರು ಪಂದ್ಯಗಳಿಗೆ ನಿಷೇಧಿಸಬೇಕಿತ್ತು. ಈಗ ಧೋನಿ ಈ ರೀತಿ ಮಾಡಿದ್ದಾರೆ ಎಂದರೆ, ನಾಳೆ ಮತ್ತೊಬ್ಬ ನಾಯಕನೂ ಅದೇ ರೀತಿ ಮಾಡುತ್ತಾನೆ. ಆಗ ಅಂಪೈರ್ಗೆ ಏನು ಬೆಲೆ ಇರಲಿದೆ’ ಎಂದು ಸೆಹ್ವಾಗ್, ಧೋನಿ ವಿರುದ್ಧ ಕಿಡಿಕಾಡಿದ್ದಾರೆ.
CSK ಗೆಲುವಿನ ಬೆನ್ನಲ್ಲೇ ಧೋನಿಗೆ ಬಿತ್ತು ಬರೆ..!
ಚೆನ್ನೈ ಸೂಪರ್’ಕಿಂಗ್ಸ್-ರಾಜಸ್ಥಾನ ರಾಯಲ್ಸ್ ನಡುವಿನ ಪಂದ್ಯದಲ್ಲಿ ಕೊನೆಯ ಓವರ್ ಬೌಲಿಂಗ್ ಮಾಡಿದ ಬೆನ್ ಸ್ಟೋಕ್ಸ್ ಹಾಕಿದ ಫುಲ್ ಟಾಸ್ ಎಸೆತವನ್ನು ಅಂಪೈರ್ ಉಲ್ಲಾಸ್ ಘಂಡೆ ಮೊದಲು ನೋಬಾಲ್ ನೀಡಿ ಆ ಬಳಿಕ ಲೆಗ್ ಅಂಪೈರ್ ಆಕ್ಷೆನ್’ಫರ್ಡ್ ಜತೆ ಚರ್ಚಿಸಿ ನೋಬಾಲ್ ಅಲ್ಲವೆಂದು ತೀರ್ಮಾನವಿತ್ತರು. ಆಗ ಧೋನಿ ಅಂಪೈರ್ ಜತೆ ವಾಗ್ವಾದ ನಡೆಸಿದ್ದರು.
ಸಿಕ್ಸರ್ ಬಾರಿಸಿದ ಜಡೇಜಾ ತಲೆ ಮೇಲೆ ಹೊಡೆದ ಧೋನಿ!
ಐಸಿಸಿ ನೀತಿ ಸಂಹಿತೆ ಪ್ರಕಾರ ಅಂಪೈರ್ ನಿರ್ಧಾರ ಪ್ರಶ್ನಿಸಿ ಕಟು ಪದಗಳನ್ನು ಬಳಸಿದರೆ, ಇಲ್ಲವೇ ಅನುಚಿವಾಗಿ ವರ್ತಿಸಿದರೆ ಗರಿಷ್ಠ ಒಂದು ಟೆಸ್ಟ್ ಇಲ್ಲವೇ ಎರಡು ಏಕದಿನ ಪಂದ್ಯಗಳ ಮಟ್ಟಿಗೆ ಆಟಗಾರನ ಮೇಲೆ ನಿಷೇಧ ಹೇರಬಹುದಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.